ಪುನೀತ್ ಗೆ 3 ನೇ ಬಾರಿ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಸಂತೋಷ್

Date:

‘ರಾಜಕುಮಾರ’, ‘Mr & Mrs. ರಾಮಾಚಾರಿ’, ‘ಯುವರತ್ನ’ ಸಿನಿಮಾದ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಕೊನೆಗೂ ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ. ಡಿಸೆಂಬರ್​ನಲ್ಲಿ ನ್ಯೂಸ್​ ಫಸ್ಟ್​​ ನೀಡಿದ್ದ ಎಕ್ಸ್​ಕ್ಲೂಸಿವ್​ ಮಾಹಿತಿ ಪ್ರಕಾರ, ಸಂತೋಷ್​ ಆನಂದ್​ರಾಮ್​ ತಮ್ಮ ನೆಕ್ಸ್ಟ್​ ಸಿನಿಮಾವನ್ನೂ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಜೊತೆ ಮಾಡಲು ಹೊರಟಿದ್ದಾರೆ. ಯೆಸ್​.. ಮತ್ತೊಮ್ಮೆ ಆನಂದ್​ರಾಮ್​-ಪುನೀತ್​ ಜೋಡಿ ಒಂದಾಗಲಿದೆ. ಅಂದ್ಹಾಗೇ, ಇವರಿಗೆ ಮತ್ತೆ ಜೊತೆಯಾಗ್ತಿರೋದು ಹೊಂಬಾಳೆ ಫಿಲ್ಮ್ಸ್​ ವಿಜಯ್​ ಕಿರಗಂದೂರ್​.

ವಿಜಯ್​ ಕಿರಗಂದೂರ್​ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ, ಈಗಾಗಲೇ ಸಂತೋಷ್​ ಆನಂದ್​ರಾಮ್​ ‘ರಾಜಕುಮಾರ’ ಹಾಗೂ ‘ಯುವರತ್ನ’ ಸಿನಿಮಾಗಳಿಗೆ ಹೂಡಿಕೆ ಮಾಡಿದ್ದಾರೆ. ಇದೀಗ ಮುಂದಿನ ಸಿನಿಮಾಗೂ ಬಂಡವಾಳ ಹೂಡಲಿದ್ದು, ಮೂರನೇ ಬಾರಿಗೆ ಈ ತ್ರಿವಳಿಗಳ ಸಂಗಮ ಆಗಲಿದೆ.

ಇನ್ನು ಈ ಬಗ್ಗೆ ಸ್ವತಃ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಟ್ವೀಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್​ ನೀಡಿದ್ದಾರೆ. ‘ಯುವರತ್ನ’ ರಿಲೀಸ್​ಗೂ ಮುಂಚೆಯೇ ಈ ನಿರ್ದೇಶಕರು ಈ ಸುದ್ದಿ ನೀಡಿರೋದು ವಿಶೇಷ. ‘ಬಹಳ ಜನ ನನ್ನ ಮುಂದಿನ ಸಿನಿಮಾ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಜೊತೆನಾ ಅಂತ ಕೇಳ್ತಿದ್ರಿ.. ಹೌದು, ನಾನು ನನ್ನ ಮುಂದಿನ ಸಿನಿಮಾವನ್ನ ಮತ್ತೆ ನನ್ನ ಐಕಾನ್​ ಪುನೀತ್​ ರಾಜ್​ಕುಮಾರ್​ ಜೊತೆ ಮಾಡಲಿದ್ದೇನೆ. ಅವರ ಜೊತೆ ಮೂರನೇ ಬಾರಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದ ನನ್ನ ಮೇಲಿರಲಿ’ ಅಂತ ಬರೆದು ಅಭಿಮಾನಿಗಳಿಗೆ ಸೂಪರ್​ ನ್ಯೂಸ್​ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...