ಪುನೀತ್ ರಾಜ್ಕುಮಾರ್ ಅಗಲಿಕೆ ಹಿನ್ನೆಲೆ ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು, ಮತ್ತು ದಕ್ಷಿಣ ಭಾರತದ ಸಿನಿ ಸ್ಟಾರ್ಸ್ಗೆ ಆಮಂತ್ರಣ ನೀಡಲಾಗಿದೆ.
ಜೊತೆಗೆ ರಾಜಕಾರಣಿಗಳು, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗೆ ಸುಮಾರು ಎರಡು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ನಾಳೆಯ ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆದ್ರೆ ಅಭಿಮಾನಿಗಳಿಗೇ ಅಂತಾನೇ ಪ್ರತ್ಯೇಕ ಕಾರ್ಯಕ್ರಮ ನಡೆಸಲು ಚಲಚಿತ್ರ ವಾಣಿಜ್ಯ ಮಂಡಳಿ ಮತ್ತು ಶಿವರಾಜ್ಕುಮಾರ್ ನಿರ್ಧಾರಿಸಿದ್ದಾರೆ.
ಬೆಂಗಳೂರು ಬಿಟ್ಟು ರಾಜ್ಯದ ಇನ್ನೊಂದು ಭಾಗದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತೆ. ಎಲ್ಲಿ, ಯಾವತ್ತು ಅಂತ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತೆ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.