No menu items!
12.5 C
Munich
Tuesday, April 28, 2026

ಪುನೀತ್ ಬೋರ್ಡ್ ಕೆಡವಿದವ ಕಂಬಿ ಹಿಂದೆ!

Must read

ನಟ ಪುನೀತ್ (Puneeth Rajkumar) ಹೆಸರಿಟ್ಟಿದ್ದ ಬಡಾವಣೆ ನಾಮ ಫಲಕ ಜೆಸಿಬಿಯಿಂದ (JCB) ಧ್ವಂಸ ಮಾಡಲಾಗಿದ್ದು, ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ (Kolar) ಜಿಲ್ಲೆ ಬಂಗಾರಪೇಟೆ (Bangarapete) ತಾಲೂಕಿನ ದೇಶಿಹಳ್ಳಿ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ.

ಬಡಾವಣೆ ನಿವಾಸಿಗಳು ಕೆಸರನಹಳ್ಳಿ ಪಂಚಾಯತಿಗೆ ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಹೆಸರು ಇಡಲು ಅನುಮತಿ ಕೋರಿದ್ದರು. ಪಂಚಾಯತಿ ಅಧಿಕಾರಿಗಳ ಮೌಖಿಕ ಒಪ್ಪಿಗೆ ಹಾಗೂ ಆಶ್ವಾಸನೆ ಮೇರೆಗೆ ನಾಮಫಲಕ ಅಳವಡಿಸಿದ್ದರು. ಆದರೆ ಇದೀಗ ಏಕಾ ಏಕಿ ತೆರವು ಮಾಡಲಾಗಿದೆ.

ಬಡಾವಣೆ ನಿವಾಸಿಗಳು ರಾತ್ರಿಯೇ ನಾಮಫಲಕವನ್ನು ತೆರವು ಮಾಡದಂತೆ ಪ್ರತಿರೋಧ ಮಾಡಿದರು. ಆದರೂ ಪ್ರತಿರೋದ ಗಮನಕ್ಕೆ ತೆಗೆದುಕೊಳ್ಳದೆ ತೆರವು ಮಾಡಲಾಗುತಿತ್ತು. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂದ ಬಂಗಾರಪೇಟೆ (Bangarapete Police) ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಜೆಸಿಬಿ (JCB) ಹಾಗೂ ಚಾಲಕನನ್ನು ವಶಕ್ಕೆ ಪಡೆದು ದೂರು ದಾಖಲು ಮಾಡಿದ್ದಾರೆ. ಬಡಾವಣೆ ನಿವಾಸಿಗಳು ಬಡಾವಣೆಗೆ ಮತ್ತೆ ಪುನೀತ್ ​ ಹೆಸರು ಇಡಲು ಮನವಿ ಮಾಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article