ಪುನೀತ್ ಸಾವಿಗೆ ಕನ್ನಡದಲ್ಲಿಯೇ ಸಂತಾಪ ಸೂಚಿಸಿದ ಮೋದಿ

0
35

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ರಂಗದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.ಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ , ಬಿ ಎಸ್.

ಯಡಿಯೂರಪ್ಪ ಸಹಿತ ರಾಜಕೀರ ರಂಗದ ಗಣ್ಯರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

”ವಿಧಿಯ ಕ್ರೂರ ತಿರುವು ಪುನೀತ್ ರಾಜ್‌ಕುಮಾರ್ ಎಂಬ ಸಮೃದ್ಧ ಮತ್ತು ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಅವರಿಗೆ ಬಿಟ್ಟು ಹೋಗುವ ವಯಸ್ಸಾಗಿರಲಿಲ್ಲ. ಮುಂದಿನ ಪೀಳಿಗೆ ಅವರ ಕೆಲಸ ಮತ್ತು ಅದ್ಭುತ ವ್ಯಕ್ತಿತ್ವವ ನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು, ಓಂ ಶಾಂತಿ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here