ಪೂಜೆ ವಿಚಾರಕ್ಕೆ ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ !

Date:

ಪೂಜೆ ವಿಚಾರಕ್ಕೆ ಪೂಜಾರಿಗಳಿಂದ ತ್ರಿಶೂಲ ಹಿಡಿದು ಬಡಿದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಚಿಕ್ಕಲ್ಲೂರು ದೇವಾಲಯದಲ್ಲಿ
ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ.

ಗಾಯಾಳುಗಳನ್ನು ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ (65), ಶಿವಕುಮಾರ ಸ್ವಾಮಿ (40) ಹಾಗೂ ನಂಜುಂಡ ಸ್ವಾಮಿ (32) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುತ್ತಿತ್ತು. ಈ ಸಮಯದಲ್ಲಿ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ ಎಂದು ತಡೆ ಒಡ್ಡಿದ್ದಾರೆ. ಹೀಗಾಗಿ ನಂಜುಂಡಸ್ವಾಮಿ ಮತ್ತು ಶಂಕರಪ್ಪನ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...