ಪೂರ್ವ ಮುಂಗಾರು ಆರ್ಭಟ: ರಾಜ್ಯದಲ್ಲಿ ಮಹಾಮಳೆಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆ

Date:

ಪೂರ್ವ ಮುಂಗಾರು ಆರ್ಭಟ: ರಾಜ್ಯದಲ್ಲಿ ಮಹಾಮಳೆಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ದಿಢೀರ್ ಮಳೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆಗೆ ಕಾರಣವಾಗಿದೆ. ಹಲವು ತಗ್ಗು ಪ್ರದೇಶಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿದ್ದರೆ, ಕೆಲ ಭಾಗಗಳ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದೇ ದಿನದ ಮಳೆರಾಯನ ಆರ್ಭಟಕ್ಕೆ ನಾಲ್ವರು ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನಲ್ಲಿ ಉದ್ಯೋಗಿಯೊಬ್ಬರನ್ನು ಬಲಿ ಪಡೆದಿದ್ದ ಮಳೆ, ರಾತ್ರಿ ಹೊತ್ತಿಗೆ ಮತ್ತಿಬ್ಬರನ್ನು ಬಲಿ ಪಡೆದಿದೆ. ಬಿಟಿಎಂ ಲೇಔಟ್ನ 2ನೇ ಹಂತದ ಎನ್ಎಸ್ ಪಾಳ್ಯದ ಮಧುವನ ಅಪಾರ್ಟ್ಮೆಂಟ್ ಬೇಸ್ಮೆಂಟ್ನಲ್ಲಿ ದುರ್ಘಟನೆ ಸಂಭವಿಸಿದೆ. ಮಳೆಯಿಂದ ಬೇಸ್ಮೆಂಟ್ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಅಪಾರ್ಟ್ಮೆಂಟ್ ನಿವಾಸಿ ಮನೋಹರ ಕಾಮತ್ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 2 ಕಡೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿದ್ದಾರೆ. ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಯಾರಿಗೆ ಪರಿಹಾರ ಕೊಡಬೇಕೋ ಅವರಿಗೆ ಕೊಡುತ್ತೇವೆ. ಉಳಿದುಕೊಳ್ಳಲು ಜಾಗದ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...