No menu items!
13.9 C
Munich
Wednesday, April 29, 2026

ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

Must read

ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು,
ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ”ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದರು.

- Advertisement -spot_img

More articles

- Advertisement -spot_img

Latest article