ಪೈಲ್ವಾನ್ ಮಾತ್ರವಲ್ಲ ಕುರುಕ್ಷೇತ್ರ ಕೂಡ ಮುಂದಕ್ಕೆ..!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಈ ಎರಡು ಸಿನಿಮಾಗಳು ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಚಿತ್ರಗಳು.
ಸುದೀಪ್ ಮತ್ತು ದರ್ಶನ್ ಅಭಿಮಾನಿಗಳು ಬಹುದಿನಗಳಿಂದ ಈ ಸಿನಿಮಾಗಳಿಗೆ ಕಾಯುತ್ತಿದ್ದಾರೆ. ಆಗಸ್ಟ್ 9ಕ್ಕೆ ಕುರುಕ್ಷೇತ್ರ ಮತ್ತು ಪೈಲ್ವಾನ್ ಎರಡೂ ಒಂದೇ ದಿನ ರಿಲೀಸ್ ಆಗುತ್ತವೆ ಎಂದೇ ಹೇಳಲಾಗುತ್ತಿತ್ತು. ಈ ಎರಡು ಸಿನಿಮಾಗಳು ಒಟ್ಟಿಗೆ ರಿಲೀಸಾದ್ರೆ ಥಿಯೇಟರ್​​ಗಳ ಸಮಸ್ಯೆ ಎದುರಾಗಬಹುದು. ಕಲೆಕ್ಷನ್ ವಿಚಾರದಲ್ಲೂ ಲಾಸ್ ಆಗುವ ಸಾಧ್ಯತೆ ಇತ್ತು. ಆದರೆ, ಈ ಎರಡು ಸಿನಿಮಾ ರಿಲೀಸ್ ಡೇಟ್​ ನಲ್ಲಿ ಬದಲಾವಣೆಗಳಾಗಿದ್ದವು.
ಕುರುಕ್ಷೇತ್ರ ಆಗಸ್ಟ್ 2ಕ್ಕೆ ಪೈಲ್ವಾನ್ ಆಗಸ್ಟ್ 29ಕ್ಕೆ ರಿಲೀಸ್ ಎಂದು ತಿಳಿದುಬಂದಿತ್ತು. ಎಲ್ಲೆಡೆ ಸುದ್ದಿಗಳೂ ಕೂಡ ಹೀಗೆ ಹರಿದಾಡಿದ್ದವು. ಆದರೆ, ಪೈಲ್ವಾನ್ ಮತ್ತೂ ಮುಂದಕ್ಕೆ ಹೋಗಿ ಸೆಪ್ಟೆಂಬರ್ 12ಕ್ಕೆ ರಿಲೀಸ್ ಆಗಲಿದೆ ಎನ್ನುವುದು ನಿನ್ನೆಯಷ್ಟೇಯಾದ ಪಕ್ಕಾ ವರದಿ. ಆದರೆ,. ಈ ಪೈಲ್ವಾನ್ ಮಾತ್ರವಲ್ಲದೆ ಕುರುಕ್ಷೇತ್ರ ಕೂಡ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.


ಕುರುಕ್ಷೇತ್ರ ಆಗಸ್ಟ್ 2ಕ್ಕೆ ರಿಲೀಸ್ ಆಗುತ್ತಿಲ್ಲ. ಆಗಸ್ಟ್ 9ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿದುಬಂದಿದೆ. ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್ ಅವರಲ್ಲದೆ ರೆಬೆಲ್ ಸ್ಟಾರ್ ಅಂಬರೀಶ್, ಅರ್ಜುನ್ ಸರ್ಜಾ, ಕ್ರೇಜಿಸ್ಟಾರ್ ರವಿಚಂದ್ರನ್, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ರವಿಶಂಕರ್ ಸೇರಿದಂತೆ ದೊಡ್ಡ ತಾರಗಣವಿದೆ.
ಪೈಲ್ವಾನ್ ಹೆಬ್ಬುಲಿ ಖ್ಯಾತಿಯ ಕೃಷ್ಣ ಡೈರೆಕ್ಷನ್ ಮಾಡಿರುವ ಸಿನಿಮಾ, ಈ ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಆಕಾಂಕ್ಷ ನಟಿಸಿದ್ದಾರೆ. ಸುನೀಲ್ ಶೆಟ್ಟಿ, ಸುಶಾಂತ್ ಸಿಂಗ್ ಸೇರಿದಂತೆ ಅನೇಕ ಸ್ಟಾರ್​ ನಟರು ಅಭಿನಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...