ಪೊಗರು ಚಿತ್ರಕ್ಕೆ ಯಡಿಯೂರಪ್ಪ ಕೊಟ್ರು ಕೈ..!

Date:

ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಚಿತ್ರ ಪೊಗರು ಇದೇ ಫೆಬ್ರವರಿ 19 ರಂದು ಭರ್ಜರಿಯಾಗಿ ಬಿಡುಗಡೆಯಾಗಲು ಸಿದ್ಧತೆಯನ್ನು ನಡೆಸಲಾಗಿತ್ತು. ಇದೇ ಸಮಯಕ್ಕೆ ಫೆಬ್ರವರಿ ತಿಂಗಳಿನಿಂದ ದೇಶದಾದ್ಯಂತ ಸಂಪೂರ್ಣವಾಗಿ ಚಿತ್ರಮಂದಿರಗಳನ್ನ ತೆರೆಯಬಹುದು ಎಂಬ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿತ್ತು. ಬಿಡುಗಡೆಗೆ ರೆಡಿಯಾಗಿರುವ ಪೊಗರು ಚಿತ್ರಕ್ಕೆ ಇದು ದೊಡ್ಡ ಪ್ಲಸ್ ಪಾಯಿಂಟ್ ಆಗಿತ್ತು.

 

 

ಆದರೆ ಇದೀಗ ಬಂದಿರುವ ಹೊಸ ನಿಯಮದ ಪ್ರಕಾರ ಪೊಗರು ಚಿತ್ರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹೌದು ರಾಜ್ಯ ಸರ್ಕಾರ ಹೊಸ ನಿಯಮವನ್ನು ಹೊರಡಿಸಿದ್ದು ಫೆಬ್ರವರಿ ತಿಂಗಳು ಮುಗಿಯುವವರೆಗೆ ಕರ್ನಾಟಕದ ಯಾವುದೇ ಚಿತ್ರಮಂದಿರದಲ್ಲಿ ಸಂಪೂರ್ಣವಾಗಿ ಪ್ರೇಕ್ಷಕರಿಗೆ ಅವಕಾಶವನ್ನ ನೀಡುವಂತಿಲ್ಲ. ಹೌದು ಫೆಬ್ರವರಿ ತಿಂಗಳು ಪೂರ್ತಿ ಕರ್ನಾಟಕದಲ್ಲಿನ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಸಹ 50% ಪ್ರೇಕ್ಷಕರಿಗೆ ಮಾತ್ರ ಅವಕಾಶವನ್ನು ನೀಡಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ.

 

 

ಯಡಿಯೂರಪ್ಪನವರ ಈ ಹೊಸ ನಿರ್ಧಾರದಿಂದ ಇದೀಗ ಬಿಡುಗಡೆಗೆ ರೆಡಿಯಾಗಿದ್ದ ಪೊಗರು ಚಿತ್ರಕ್ಕೆ ಕೊಂಚ ಹಿನ್ನಡೆಯಾಗಿರುವುದಂತೂ ನಿಜ. ಸಂಪೂರ್ಣ ಚಿತ್ರಮಂದಿರ ಸಿಗಲಿದೆ ಹೀಗಾಗಿ ಒಳ್ಳೆಯ ಕಲೆಕ್ಷನ್ ಮಾಡಿಕೊಳ್ಳಬಹುದು ಎಂದು ಯೋಜನೆ ಹಾಕಿಕೊಂಡಿದ್ದ ಪೊಗರು ಚಿತ್ರತಂಡಕ್ಕೆ ಇದೀಗ ಬೇಸರ ಉಂಟಾಗಿದೆ. ಇತರೆ ರಾಜ್ಯಗಳಲ್ಲಿ ಸಂಪೂರ್ಣವಾಗಿ ಚಿತ್ರಮಂದಿರವನ್ನು ತೆರೆದಿದ್ದು ಕರ್ನಾಟಕದಲ್ಲಿ ಮಾತ್ರ ವಿಶೇಷವಾಗಿ ಇನ್ನೂ ಅದೇ ಹಳೇ ನಿಯಮವನ್ನ ಏಕೆ ಪಾಲಿಸಬೇಕು ಎಂಬುದು ಇದೀಗ ಜನರಲ್ಲಿ ಕಾಡುತ್ತಿರುವ ಪ್ರಶ್ನೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...