ಪೊಲೀಸರಿಗೆ ತುಳು ಕಲಿಸಿದ ಪೊಲೀಸ್ ಆಯುಕ್ತ

Date:

ಪೊಲೀಸರು ಜನಸ್ನೇಹಿಯಾಗಿರಬೇಕು ಅನ್ನುವುದು ಎಲ್ಲರ ವಾದ. ಜನ ಕಷ್ಟ ಅಂತಾ ಬಂದಾಗ ಸ್ಪಂದಿಸಬೇಕು, ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಬೇಕು, ಭಾಷೆಯೂ ಹಿತ-ಮಿತವಾಗಿರಬೇಕು. ಇದು ಜನಸ್ನೇಹಿ ಪೊಲೀಸರ ಲಕ್ಷಣ ಅನ್ನುವುದು ಜನರ ಮಾತು.

ಮಂಗಳೂರು ನಗರ ಪೊಲೀಸರನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನರ ಮಾತೃ ಭಾಷೆಯನ್ನು, ಭಾಷೆ ಗೊತ್ತಿರದ ಪೊಲೀಸರಿಗೆ ಕಲಿಸುವ ಮೂಲಕ ಪೊಲೀಸರನ್ನು ಜನಸ್ನೇಹಿಯನ್ನಾಗಿಸಲು ಪ್ರಯತ್ನಿಸಿದ್ದಾರೆ.

ಪೊಲೀಸರು ಸದಾ ಜನರ ಜೊತೆ ಬೆರೆಯಬೇಕಾಗಿರುವುದರಿಂದ, ಜನರ ಬಳಸುವ ಭಾಷೆ ಪೊಲೀಸರಿಗೂ ತಿಳಿದಿದ್ದರೆ ಕರ್ತವ್ಯ ನಿರ್ವಹಿಸುವುದಕ್ಕೆ ಬಹಳ ಅನುಕೂಲವಾಗುತ್ತದೆ. ತನಿಖೆಯ ದೃಷ್ಟಿಯಿಂದಲೂ, ಜನರ ಸಮಸ್ಯೆಗಳಿಗೂ ಸ್ಪಂದಿಸುವ ದೃಷ್ಟಿಯಿಂದಲೂ ಪ್ರಾದೇಶಿಕ ಭಾಷೆಯ ಅರಿವಿದ್ದರೆ ಒಳ್ಳೆಯದು ಎಂಬುವುದನ್ನು ಕಮೀಷನರ್ ಎನ್. ಶಶಿಕುಮಾರ್ ಮನಗಂಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...