ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್

Date:

ರಾಜ್ಯದ ಪೊಲೀಸ್‌ ಮತ್ತು ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್ ಸಿಕ್ಕಿದೆ. ಖಾಕಿಪಡೆಯ ರಜೆ ಬೇಡಿಕೆ ಮತ್ತು ಸರ್ಕಾರಿ ನೌಕರರ ಗಳಿಕೆ ರಜೆಗೆ ವೇತನ ಸೌಲಭ್ಯ ಎರಡೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ದೊರೆತಿದೆ.

ಈವರೆಗೂ ವಾರದ ರಜೆ ಇಲ್ಲವೆಂಬ ಪೊಲೀಸರ ಬೇಡಿಕೆಗೆ ಡಿಜಿಪಿ ಸ್ಪಂದಿಸಿದ್ದಾರೆ. ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೂ ಕಡ್ಡಾಯವಾಗಿ ವಾರದ ರಜೆ ನೀಡಬೇಕೆಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಸರ್ಕಾರಿ ನೌಕರರು, ಸಿಬ್ಬಂಧಿಗಳಿಗೆ ವಾರದ ರಜೆ ಮತ್ತು 2ನೇ, 4ನೇ ಶನಿವಾರ ರಜೆ ಸೌಲಭ್ಯ ಇದೆ. ಆದರೆ ಪೊಲೀಸರಿಗೆ ಮಾತ್ರ ವಾರದ ರಜೆಯೂ ಸಿಗುತ್ತಿಲ್ಲ. ಒತ್ತಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾಗಿದೆ. ಸಿಬ್ಬಂದಿಗಳ ಮಾನಸಿಕ ಆರೋಗ್ಯ ಮತ್ತು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ವಿಶ್ರಾಂತಿಯ ಅಗತ್ಯವಿದೆ. ಆದ್ದರಿಂದ ರಜೆ ಕೊಡಿ ಎಂದು ಸೂಚನೆ ಕೊಟ್ಟಿದ್ದಾರೆ.

ಆದರೆ ಬಂದೋಬಸ್ತ್‌, ಚುನಾವಣೆ ಕರ್ತವ್ಯ ಹಾಗೂ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಕಡ್ಡಾಯ ರಜೆ ನಿಯಮ ಅನ್ವಯ ಆಗುವುದಿಲ್ಲ ಎಂದು ಪ್ರವೀಣ್ ಸೂದ್ ಉಲ್ಲೇಖಿಸಿದ್ದಾರೆ.

ಪೊಲೀಸ್‌ ಸಿಬ್ಬಂದಿಗಳು ಯಾರು ವಾರದ ರಜೆ ದಿನ ಕರ್ತವ್ಯ ನಿರ್ವಹಿಸುತ್ತಾರೋ ಅವರಿಗೆ ವಾರದ ರಜೆ ಭತ್ಯೆ ನೀಡಬೇಕು. ಎಸ್‌ಪಿ ದರ್ಜೆ ಅಧಿಕಾರಿಗಳು ಇದರ ಮೇಲ್ವಿಚಾರಣೆ ನಿರ್ವಹಿಸಬೇಕು. ಈ ಹಿಂದೆಯೂ ವಾರದ ರಜೆ, ಭತ್ಯೆ ನೀಡುವಂತೆ ಹಲವು ಬಾರಿ ಸುತ್ತೋಲೆ ಹೊರಡಿಸಿದರೂ ಸೌಲಭ್ಯ ಸಿಗುತ್ತಿಲ್ಲ ಎಂಬ ಪತ್ರಗಳು ಬರುತ್ತಿವೆ. ಮತ್ತೆ ಇಂತಹ ಪ್ರಸಂಗ ಮರುಕಳಿಸದಂತೆ ಎಸ್‌ಪಿ ದರ್ಜೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಪ್ರವೀಣ್ ಸೂದ್ ಎಲ್ಲ ಐಜಿಪಿ, ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಇನ್ನು ಸರ್ಕಾರಿ ನೌಕರರ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಿದ್ದ ಆದೇಶ ಹಿಂಪಡೆದು ರಾಜ್ಯ ಸರ್ಕಾರ ಮರು ಆದೇಶ ಪ್ರಕಟಿಸಿದೆ. ಇದರ ಪ್ರಕಾರ 2021 ರ ಜನವರಿ 01 ರಿಂದ ಡಿಸೆಂಬರ್ 31 ರವರೆಗೆ 15 ದಿನಗಳ ಗಳಿಕೆ ರಜೆ ನಗದೀಕರಣ ಮಾಡಿಕೊಳ್ಳಬಹುದು ಎಂದು ಆದೇಶದಲ್ಲಿ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...