ಪ್ರಜ್ವಲ್ ರೇವಣ್ಣನನ್ನು 6 ದಿನಗಳ ಎಸೈಟಿ ಕಸ್ಟಡಿಗೆ ನೀಡಿದ ನ್ಯಾಯಾಧೀಶರು

Date:

ಬೆಂಗಳೂರು: ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣರನ್ನು ಹಾಜರುಪಡಿಸಲಾಗಿತ್ತು. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಭಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿದೆ. ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಜ್ವಲ್‌ ಅವರನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್‌ಐಟಿ ಕಚೇರಿಗೆ ಕರೆ ತಂದರು.
ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ 6 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...