ಪ್ರಜ್ವಲ್ ರೇವಣ್ಣ ಜೂನ್ 10ರ ತನಕ ಎಸ್ ಐಟಿ ವಶಕ್ಕೆ

Date:

ಬೆಂಗಳೂರು: ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ.
ಎಸ್‍ಐಟಿ ಪರ ವಕೀಲರು ತನಿಖೆಗೆ ಸಮಯ ಸಾಕಾಗಿಲ್ಲ. ಮೊಬೈಲ್ ವಿಚಾರವಾಗಿ ಮಾಹಿತಿ ಇನ್ನೂ ಕೂಡ ಸಿಕ್ಕಿಲ್ಲ. ಮುಖ್ಯವಾಗಿ ಟೈಂ ಶಾರ್ಟೆಜ್ ಆಗಿದೆ. ವಿದೇಶದಲ್ಲಿ ಇದ್ದಾಗ ಹಣ ಹೇಗೆ ಸಂದಾಯ ಆಗಿದೆ ಗೊತ್ತಾಗಿಲ್ಲ. ಇವರು ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಇವರಿಗೆ ಹಣ ನೀಡಿದವರು ಯಾರು ಗೊತ್ತಾಗಬೇಕು.
ಕೆಲವು ಸಂತ್ರಸ್ತೆಯರು, ಸಾಕ್ಷಿಗಳನ್ನು ಮುಖಾಮುಖಿ ಮಾಡಬೇಕಾಗಿದೆ. ಏನು ಕೇಳಿದ್ರೂ ಸರಿಯಾದ ಉತ್ತರವನ್ನು ನೀಡಿಲ್ಲ. ನಾನು ಏನು ಮಾಡಿಲ್ಲ ಅಂತ ಪ್ರಜ್ವಲ್ ಹೇಳುತ್ತಾ ಇದ್ದಾರೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋಗಿದ್ದರು ಹೀಗಾಗಿ ಜೂನ್ 10 ರ ತನಕ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...