No menu items!
16.9 C
Munich
Monday, June 15, 2026

ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ ರದ್ದತಿ ಕುರಿತು ವಿದೇಶಾಂಗ ಸಚಿವಾಲಯ ಹೇಳಿದ್ದೇನು..?

Must read

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ದಿ ಮೋಸ್ಟ್ ವಾಂಟೆಡ್ ಆರೋಪಿಯಾಗಿರು ಪ್ರಜ್ವಲ್ ರೇವಣ್ಣನ ಒಂದು ತಿಂಗಳ ಕಣ್ಣಾ ಮುಚಾಲೆ ಆಟ ಎಂಡ್‌ ಆಗಿದೆ.ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಹೌದು ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್,
ಪಾಸ್‌ಪೋರ್ಟ್‌ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಶೋಕಾಸ್ ನೋಟಿಸ್‌ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜೈಸ್ವಾಲ್‌ ಹೇಳಿದ್ದಾರೆ. 10 ದಿನಗಳ ಒಳಗೆ ಪ್ರಜ್ವಲ್‌ ಸಮಂಜಸವಾಗಿ ಉತ್ತರಿಸದಿದ್ದಲ್ಲಿ ಮುಂದಿನ ಪ್ರಕ್ರಿಯೆಯನ್ನು ಜೂ.2ರ ಬಳಿಕ ಮುಂದುವರೆಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article