ಪ್ರತಿದಿನ ಖರ್ಜೂರ ಸೇವನೆಯಿಂದ ಸಿಗುತ್ತೆ ಸಾಕಷ್ಟು ಲಾಭಗಳು..!

Date:

ಪ್ರತಿದಿನ ಖರ್ಜೂರ ಸೇವನೆಯಿಂದ ಸಿಗುತ್ತೆ ಸಾಕಷ್ಟು ಲಾಭಗಳು..!

ಖರ್ಜೂರವು ರುಚಿಕರವಾದದ್ದು ಮಾತ್ರವಲ್ಲ, ದೇಹದ ಆರೋಗ್ಯಕ್ಕೂ ಬಹುಮುಖ್ಯವಾದ ಪೋಷಕಾಂಶಗಳನ್ನು ಹೊಂದಿದೆ. ದೈನಂದಿನ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬಹುದು ಎಂದು ತಜ್ಞರು ಹೇಳಿದ್ದಾರೆ.
ಖರ್ಜೂರದಲ್ಲಿ ಪೊಟ್ಯಾಸಿಯಂ, ವಿಟಮಿನ್ಗಳು, ನಾರುಪದಾರ್ಥ, ಉತ್ಕರ್ಷಣ ನಿರೋಧಕಗಳು ಮತ್ತು ಲೋಹಾಂಶಗಳು ಇದ್ದು, ಇವು ದೇಹದ ವಿವಿಧ ಅಂಗಾಂಗಗಳಿಗೆ ಶಕ್ತಿ ನೀಡುತ್ತವೆ. ಅಧ್ಯಯನಗಳ ಪ್ರಕಾರ, ಪ್ರತಿದಿನ ಒಂದೇ ಒಂದು ಖರ್ಜೂರ ಸೇವನೆ ಮಾಡಿದರೂ ಕ್ಯಾನ್ಸರ್ ಸೇರಿದಂತೆ ಹಲವಾರು ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು.
ಪ್ರಯೋಜನಗಳು
• ಖರ್ಜೂರದಲ್ಲಿರುವ ಪೊಟ್ಯಾಸಿಯಂ ಮತ್ತು ನಾರುಪದಾರ್ಥಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತವೆ.
• ಇನ್ಫುಷಿಯನ್ ಆಗಿರುವ ಐರನ್ ದೇಹದಲ್ಲಿ ರಕ್ತ ಹಿನ್ನತೆ (ಅನಿಮಿಯಾ) ನಿವಾರಣೆಗೆ ಸಹಕಾರಿಯಾಗುತ್ತದೆ.
• ಕ್ಯಾಲ್ಸಿಯಂ ಮತ್ತು ವಿಟಮಿನ್ ಸೇರಿದಂತೆ ಹಲವು ಪೋಷಕಾಂಶಗಳು ಮೂಳೆ ಬಲವರ್ಧನೆಗೆ ನೆರವಾಗುತ್ತವೆ.
• ನಾರುಪದಾರ್ಥಗಳ ಅಂಶ ಜೀರ್ಣಕ್ರಿಯೆ ಸುಧಾರಣೆ ಹಾಗೂ ಮಲಬದ್ಧತೆ ನಿವಾರಣೆಗೆ ನೆರವಾಗುತ್ತದೆ.
• ಖರ್ಜೂರದಲ್ಲಿರುವ ಉತ್ಕೃಷಣ ನಿರೋಧಕಗಳು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ.
• ನಿಯಮಿತ ಸೇವನೆಯಿಂದ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಹಾಗೂ ಒತ್ತಡ ನಿಯಂತ್ರಣವಾಗುತ್ತದೆ.
• ನೈಸರ್ಗಿಕ ಸಕ್ಕರೆ ಇರುವುದರಿಂದ ಶುಗರ್ ಲೆವೆಲ್ ಹಾಗೂ ತೂಕ ನಿಯಂತ್ರಣಕ್ಕೂ ಸಹಾಯಕ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...