ಪ್ರತಿದಿನ ಬೆಳಿಗ್ಗೆ 3 ಬಾದಾಮಿ ತಿಂದರೆ ಆಗುವ ಪ್ರಯೋಜನಗಳೇನು ಗೊತ್ತಾ..?

Date:

ಪ್ರತಿದಿನ ಬೆಳಿಗ್ಗೆ 3 ಬಾದಾಮಿ ತಿಂದರೆ ಆಗುವ ಪ್ರಯೋಜನಗಳೇನು ಗೊತ್ತಾ..?

ಬಾದಾಮಿಯ ಪೌಷ್ಟಿಕಾಂಶದ ಗುಣಲಕ್ಷಣಗಳಲ್ಲಿ ಬಲವಾದ ನಂಬಿಕೆಯಿಂದ ಹುಟ್ಟಿಕೊಂಡಿದೆ, ಬಾದಾಮಿಯ ದೈನಂದಿನ ಸೇವನೆಯು ವಾತ ಮತ್ತು ಪಿತ್ತ ದೋಷಗಳನ್ನು ನಿವಾರಿಸಲು ಪ್ರಯೋಜನಕಾರಿಯಾಗಿದ್ದು, ಮಧುಮೇಹಕ್ಕೆ, ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಸಹಕಾರಿಯಾಗಲಿದೆ.
ಉತ್ತಮ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಬಾದಾಮಿ ತುಂಬಾ ಉಪಯುಕ್ತವಾಗಿದೆ. ಜೊತೆಗೆ ಬಾದಾಮಿ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ನೀರಿನಲ್ಲಿ ನೆನೆಸಿದ ಬಾದಾಮಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಚರ್ಮದ ಕಾಂತಿಗೂ ತುಂಬಾ ಉಪಯುಕ್ತವಾಗಿದೆ. ಪ್ರತಿದಿನ ನೀರಿನಲ್ಲಿ ನೆನಸಿಟ್ಟ ಬಾದಾಮಿ ಸೇವನೆ ಮಾಡುವುದರಿಂದ ನಿಮ್ಮ ಚರ್ಮ ಆರೋಗ್ಯವಾಗಿರುತ್ತದೆ. ಇದರಲ್ಲಿರುವ ವಿಟಮಿನ್ ಗಳು ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತವೆ. ಬಾದಾಮಿ ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಇದರಲ್ಲಿ ಬಲವಾದ ಮೂಳೆಗಳಿಗೆ ಬೇಕಾದ ಕ್ಯಾಲ್ಸಿಯಂ ಮತ್ತು ರಂಜಕ ಹೇರಳವಾಗಿದೆ.
ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಪ್ರತಿದಿನ ಬಾದಾಮಿ ಸೇವನೆ ಮಾಡಬೇಕು. ಬಾದಾಮಿ ತಿನ್ನುವುದರಿಂದ ಕೊಬ್ಬು ಹೆಚ್ಚಾಗುವುದಿಲ್ಲ. ಪ್ರತಿದಿನ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹಾಗಾಗಿ ಈ ಎಲ್ಲಾ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಜೊತೆಗೆ ದೇಹದ ತೂಕವನ್ನು ನಿಯಮಿತವಾಗಿ ಕಡಿಮೆ ಮಾಡಿಕೊಳ್ಳಲು ಪ್ರತಿದಿನ ಬೆಳಿಗ್ಗೆ 3 ಬಾದಾಮಿಯನ್ನು ತಪ್ಪದೇ ಸೇವನೆ ಮಾಡಿ. ಒಂದು ದಿನವೂ ತಪ್ಪಿಸಬೇಡಿ. ಈ ರೀತಿ ಮಾಡಿದರೆ ನಿಮಗೆ ಇದರ ಫಲಿತಾಂಶ ದೊರೆಯುತ್ತದೆ.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...