ಪ್ರತಿಷ್ಠಿತ ಹೊಟೆಲ್ ನಲ್ಲಿ ಊಟ ಮಾಡುವಾಗ‌ ಸಿಕ್ತು ಜಿರಳೆ..! ಬೆಚ್ಚಿಬಿದ್ದ ವಕೀಲೆ

Date:

ಬೆಂಗಳೂರು: ಪ್ರತಿಷ್ಠಿತ ಹೊಟೆಲ್ ನಲ್ಲಿ ಊಟ ಮಾಡುವಾಗ‌ ಸಿಕ್ಕಿದ ಜಿರಳೆಯನ್ನು ಕಂಡು ಹೈಕೋರ್ಟ್ ವಕೀಲೆ ಬೆಚ್ಚಿಬಿದ್ದಿದ್ದಾರೆ. ಹೌದು ಊಟ ಮಾಡುವಾಗ ಹೈಕೋರ್ಟ್ ವಕೀಲೆಗೆ ಜಿರಳೆ ಸಿಕ್ಕಿದೆ. ನಿನ್ನೆ ಸಂಜೆ ನಡೆದ ಘಟನೆ ಇದಾಗಿದೆ. ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಕಳೆದ ದಿನ ಸಂಜೆ ಹೈಕೋರ್ಟ್ ವಕೀಲೆ ದಿ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕಾಗಿ ಹೋಗಿದ್ದರು. ಈ ವೇಳೆ ಪನ್ನೀರ್ ಗ್ರೇವಿಯನ್ನು ಆರ್ಡರ್ ಮಾಡಿದ್ದರು.


ಆದರೆ ಇದನ್ನು ಸೇವಿಸುವಾಗ ಅವರಿಗೆ ಜಿರಳೆ ಕಂಡು ಬಂದಿದೆ. ಇದರಿಂದ ವಕೀಲೆ ಬೆಚ್ಚಿಬಿದ್ದಿದ್ದಾರೆ. ಹೈಕೋರ್ಟ್ ವಕೀಲೆ ಶೀಲಾ ಅವರಿಗೆ ಪ್ರತಿಷ್ಠಿತ ಹೋಟೆಲ್ ಊಟದಲ್ಲಿ ಜಿರಳೆ ಕಂಡುಬಂದಿದೆ. ಈ ವೇಳೆ ಕೋಪಗೊಂಡ ಅವರು ಹೋಟೆಲ್ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ಆಗ ಸಿಬ್ಬಂದಿ ಉಡಾಫೆ ಮಾತನಾಡಿ ಬೇರೆ ಊಟ ಕೊಡುವುದಾಗಿ ಹೇಳಿದ್ದಾರೆ.
ಇದರಿಂದ ಕೋಪಗೊಂಡ ಶೀಲಾ ಅವರು ನೇರ ಹೋಟೆಲ್ ಕಿಚನ್‌ಗೆ ತೆರಳಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಹೋಟೆಲ್ ಕಿಚನ್‌ಗೆ ತೆರಳುತ್ತಿದ್ದಂತೆ ಶೀಲಾ ಅವರು ಮತ್ತೊಮ್ಮೆ ಶಾಕ್ ಆಗಿದ್ದಾರೆ. ಆ ಹೋಟೆಲ್ ಕಿಚನ್ ಅವಸ್ಥೆ ಕಂಡು ವಾಕರಿಕೆ ಉಂಟಾಗಿದೆ. ಕಿಚನ್‌ ಸಂಪೂರ್ಣ ಗಲೀಜು ತುಂಬಿಕೊಂಡಿತ್ತು. ಇದನ್ನು ಕಂಡು ರಸ್ತೆ ಬದಿ ಹೋಟೆಲ್‌ಗಳೇ ಲೇಸು ಎಂದು ಕಿರುಚಾಡಿದ್ದಾರೆ. ಜೊತೆಗೆ ಹೋಟೆಲ್ ಬಗ್ಗೆ ದೂರು ನೀಡಿದ್ದಾರೆ.
ಮತ್ತೊಂದು ವಿಚಾರ ಅಂದರೆ ವಕೀಲೆ ಶೀಲಾ ಅವರ ಕರೆ ಸ್ವೀಕರಿಸಿ ಮಾತನಾಡಿದ ಫುಡ್ ಇನ್ಸ್‌ಪೆಕ್ಟರ್‌ ಸುಬ್ರಹ್ಮಣ್ಯ ಕೂಡ ಉಡಾಫೆ ಮಾತನಾಡಿದ್ದಾರೆ. ಅವರು ಕೂಡ ಈ ಬಗ್ಗೆ ನಿರ್ಲಕ್ಷ್ಯ ತೋರಿ ಬೇಜವಬ್ದಾರಿತನದ ಮಾತುಗಳನ್ನಾಡಿದ್ದಾರೆ. ನಾಳೆ ಬಂದು ಪರಿಶೀಲಿಸು ವುದಾಗಿ ಹೇಳಿದ್ದಾರೆ. ಇದರಿಂದ ಸಿಡಿದ ಶೀಲಾ ಅವರು ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...