ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

Date:

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
“ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು,
ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು” ಎಂದು ವಿವರಿಸಿದರು. ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ” ಎಂದರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...