ಪ್ರವಾಸೋದ್ಯಕ್ಕೆ ಪೆಟ್ಟು ನೀಡಲು ಭಯೋತ್ಪಾದಕ ಚಟುವಟಿಕೆ ನಡೆಸಲಾಗಿದೆ: ಪ್ರಹ್ಲಾದ್ ಜೋಶಿ

Date:

ಪ್ರವಾಸೋದ್ಯಕ್ಕೆ ಪೆಟ್ಟು ನೀಡಲು ಭಯೋತ್ಪಾದಕ ಚಟುವಟಿಕೆ ನಡೆಸಲಾಗಿದೆ: ಪ್ರಹ್ಲಾದ್ ಜೋಶಿ

ನವದೆಹಲಿ: ಪ್ರವಾಸೋದ್ಯಕ್ಕೆ ಪೆಟ್ಟು ನೀಡಲು ಭಯೋತ್ಪಾದಕ ಚಟುವಟಿಕೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತದ ಮುಕುಟದಂತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಬಹು ದೊಡ್ಡ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿದೆ.
ಸ್ವಿಡ್ಜರ್ಲ್ಯಾಂಡ್ಗಿಂತಲೂ ಸುಂದರವಾಗಿದೆ ಎಂಬ ಭಾವನೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದರು. ಇದನ್ನು ಸಹಿಸದೇ ಅಲ್ಲಿ ಅಶಾಂತಿ ಸೃಷ್ಟಿಸಿ, ಪ್ರವಾಸೋದ್ಯಕ್ಕೆ ಪೆಟ್ಟು ನೀಡಲು ಭಯೋತ್ಪಾದಕ ಚಟುವಟಿಕೆ ನಡೆಸಲಾಗಿದೆ ಎಂದು ಹೇಳಿದರು.
ಕಳೆದ ಐದಾರು ವರ್ಷಗಳಲ್ಲಿ ಜಮ್ಮು-ಕಾಶ್ಮೀರದ ಪ್ರವಾಸೋದ್ಯಮ ಅಭೂತಪೂರ್ವವಾಗಿ ಬೆಳೆದಿದೆ. ಇಲ್ಲಿನವರಿಗೆ ಪ್ರವಾಸೋದ್ಯಮದಿಂದ ಅತಿ ಹೆಚ್ಚು ಆದಾಯ ಬಂದಿದೆ.
ಅಲ್ಲದೇ, ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಹ ಅತ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿ ನಡೆದಿವೆ. ಜೊತೆಗೆ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಸೇರಿ ಎಲ್ಲವೂ ಭಯೋತ್ಪಾದಕರ ಕಣ್ಣು ಕುಕ್ಕಿವೆ. ಅದರ ಪರಿಣಾಮವೇ ಭಯೋತ್ಪಾದನಾ ಕೃತ್ಯ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...