ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ: ಪರಮೇಶ್ವರ್

Date:

 

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ. ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಒಪ್ಪುತ್ತಾರೆ ಅಂತ ನಮಗೆ ರಾಜ್ಯಪಾಲರ ಮೇಲೆ ವಿಶ್ವಾಸ ಇದೆ.
ನೊಟೀಸ್ ವಾಪಸ್ ಪಡೆಯಬೇಕು. ಈ ಪ್ರಕರಣದಲ್ಲಿ ಸತ್ಯಾಂಶ ಇಲ್ಲ ಅಂತ ನಿರ್ಣಯ ಮಾಡಿ ಕಳುಹಿಸಿದಾಗ ಅದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆ ಎಂದು ನಾನು ಅಂದುಕೊಳ್ಳೊಲ್ಲ ಅಂತ ಹೇಳಿದರು.
ರಾಜ್ಯಪಾಲರಿಗೆ ಅವರಿಗೆ ದತ್ತವಾದ ಅಧಿಕಾರ ಇರಬಹುದು. ಆದರೆ ಕ್ಯಾಬಿನೆಟ್ ಸಲಹೆಯನ್ನು ಅವರು ಅಷ್ಟು ಸುಲಭವಾಗಿ ತಿರಸ್ಕಾರ ಮಾಡುವುದಿಲ್ಲ ಎಂದು ಅಂದುಕೊಂಡಿದ್ದೇನೆ. ಅದನ್ನು ಮೀರಿಯೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ನಾವು ಕೂಡಾ ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....