ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ: ಪರಮೇಶ್ವರ್

Date:

 

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ. ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಒಪ್ಪುತ್ತಾರೆ ಅಂತ ನಮಗೆ ರಾಜ್ಯಪಾಲರ ಮೇಲೆ ವಿಶ್ವಾಸ ಇದೆ.
ನೊಟೀಸ್ ವಾಪಸ್ ಪಡೆಯಬೇಕು. ಈ ಪ್ರಕರಣದಲ್ಲಿ ಸತ್ಯಾಂಶ ಇಲ್ಲ ಅಂತ ನಿರ್ಣಯ ಮಾಡಿ ಕಳುಹಿಸಿದಾಗ ಅದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆ ಎಂದು ನಾನು ಅಂದುಕೊಳ್ಳೊಲ್ಲ ಅಂತ ಹೇಳಿದರು.
ರಾಜ್ಯಪಾಲರಿಗೆ ಅವರಿಗೆ ದತ್ತವಾದ ಅಧಿಕಾರ ಇರಬಹುದು. ಆದರೆ ಕ್ಯಾಬಿನೆಟ್ ಸಲಹೆಯನ್ನು ಅವರು ಅಷ್ಟು ಸುಲಭವಾಗಿ ತಿರಸ್ಕಾರ ಮಾಡುವುದಿಲ್ಲ ಎಂದು ಅಂದುಕೊಂಡಿದ್ದೇನೆ. ಅದನ್ನು ಮೀರಿಯೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ನಾವು ಕೂಡಾ ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...