ಪ್ರೀತಿಸುವಂತೆ ಪೀಡಿಸುತ್ತಿದ್ದವನು ಯುವತಿಗೆ ಚಾಕುವಿನಿಂದ ಹಲ್ಲೆ! ಆರೋಪಿ ಅರೆಸ್ಟ್

Date:

ಪ್ರೀತಿಸುವಂತೆ ಪೀಡಿಸುತ್ತಿದ್ದವನು ಯುವತಿಗೆ ಚಾಕುವಿನಿಂದ ಹಲ್ಲೆ! ಆರೋಪಿ ಅರೆಸ್ಟ್

ಬೆಂಗಳೂರು: ಪ್ರೀತಿಸುವಂತೆ ಪೀಡಿಸುತ್ತಿದ್ದ ಮನೆ ಮಾಲೀಕ ಯುವತಿ ಹಾಗೂ ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಬಸವೇಶ್ವರ ನಗರ ಕಮಲಾನಗರದಲ್ಲಿ ನಡೆದಿದೆ. ಶ್ರೀಕಾಂತ್ (45) ಬನಶಂಕರಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿಯಾಗಿದ್ದು,
ಆತನ ಮನೆಯಲ್ಲಿ ಬಾಡಿಗೆಗೆ ಇದ್ದ 20 ವರ್ಷದ ಕಾಲೇಜು ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು. ಈ ಬಗ್ಗೆ ಯುವತಿಯು ಆತನ ಪತ್ನಿಗೆ ದೂರು ನೀಡಿದ್ದಳು. ಆದರೆ ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಯುವತಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಟೆಕ್ಕಿಯು ಕೋಪಗೊಂಡಿದ್ದ. ಕಳೆದ 3 ದಿನಗಳ ಹಿಂದೆ ಯುವತಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಬೇರೊಬ್ಬ ಯುವಕನೊಂದಿಗೆ ನಿಂತಿದ್ದಳು.
ಇದನ್ನೂ ಟೆಕ್ಕಿ ಗಮನಿಸಿದ್ದ. ಬೇರೊಬ್ಬ ಯುವಕನೊಂದಿಗೆ ಪ್ರೀತಿ ಇರುವುದಕ್ಕೆ ನಿರಾಕರಿಸುತ್ತಿದ್ದೀಯಾ ಎಂದು ಟೆಕ್ಕಿಯು ಯುವಕ ಯುವತಿಗೆ ಚಾಕು ಹಾಕಿದ್ದ. ನೊಂದ ಯುವತಿಯು ಟೆಕ್ಕಿಯ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿ ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಪೊಲೀಸರು ಕಾಮುಕ ಟೆಕ್ಕಿಯನ್ನು ಬಂಧನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...