ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ಪ್ರೇಮಿಯಿಂದ ಯುವತಿಗೆ ಕೊಲೆ ಬೆದರಿಕೆ !

Date:

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಕಿಣೈ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕುಟುಂಬ ಕಂಗಾಲಾಗಿದೆ. ಯುವತಿ ಅದೇ ಗ್ರಾಮದ ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜೊತೆಗೆ ವಾಸವಿದ್ದಾಳೆ. ಬಿಕಾಂ ಓದುತ್ತಿರುವ ಈಕೆ ನಿತ್ಯ ಕಾಲೇಜಿಗೆ ಹೋಗುವಾಗಲೇ ಫಾಲೋ ಮಾಡಿ ತಿಪ್ಪಣ್ಣ ರೇಗಿಸುತ್ತಿದ್ದನು.


ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಪಾಗಲ್ ಪ್ರೇಮಿ ಕಾಟದಿಂದ ಯುವತಿ ಕಾಲೇಜಿಗೆ ಹೋಗುವುದನ್ನೇ ಬಿಟ್ಟಿದ್ದಾಳೆ. ಪ್ರೀತಿಸು, ಮದುವೆ ಆಗೆಂದು ಕಳೆದ ಮೂರು ವರ್ಷಗಳಿಂದ ಡೋಕರೆ ಪೀಡಿಸುತ್ತಿದ್ದಾನೆ.
ಮದುವೆ ಮಾಡಿಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೆದರಿಕೆ ಹಾಕಿದ್ದಾನೆ. ಸದ್ಯ ಕುಟುಂಬ ಮತ್ತೆ ರಕ್ಷಣೆ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಇದೀಗ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಕ್ಷಣೆಗಾಗಿ ಯುವತಿ ಮನೆಗೆ ಓರ್ವ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...