No menu items!
17 C
Munich
Saturday, May 2, 2026

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸೀತಾರಾಮನ್

Must read

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪ್ರಸ್ತುತಪಡಿಸುವ ಬಗ್ಗೆ ಕೇಂದ್ರೀಕರಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್​ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ. ರಾಷ್ಟ್ರಪತಿ ಹಾಗೂ ಅಧಿಕಾರಿಗಳೊಂದಿಗೆ ನಿಂತು ಬಜೆಟ್‌ ಪ್ರತಿಯೊಂದಿಗೆ ಪೋಸ್‌ ನೀಡಿದರು. ಬಳಿಕ ರಾಷ್ಟ್ರಪತಿ ಅವರೊಂದಿಗೆ ಬಜೆಟ್‌ ವಿಚಾರವಾಗಿ ಚರ್ಚೆ ನಡೆಸಿದರು.

- Advertisement -spot_img

More articles

- Advertisement -spot_img

Latest article