ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ: ಡಿ.ಕೆ. ಶಿವಕುಮಾರ್

Date:

ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್ ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ.
ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದರು.
ದರ ಏರಿಕೆ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಬಗ್ಗೆ ಕೇಳಿದಾಗ, “ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆ ಕಡಿಮೆ ಇದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...