ಬದುಕೇ ಬೇಡ ಅನ್ನೋ ಪತ್ನಿಯ ಪೋಸ್ಟ್ ಗೆ ಹರಿಕೃಷ್ಣ ಹೀಗಂದು ಬಿಟ್ರಾ..?!

Date:

ಸಂಗೀತ ಮಾಂತ್ರಿಕ ವಿ. ಹರಿಕೃಷ್ಣ ಅವರ ಪತ್ನಿ ಮಾಡಿದ ಅದೊಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ..ಹತ್ತಾರು ಪ್ರಶ್ನೆಗಳು, ಅನುಮಾನಗಳನ್ನು..ಆ ನಾಲ್ಕು ಸಾಲುಗಳು ಹುಟ್ಟಿ ಹಾಕಿವೆ…ಬದುಕೇ ಬೇಡ ಎನ್ನುವ ಪತ್ನಿಯ ಆ ಪೋಸ್ಟ್ ಬಗ್ಗೆ ವಿ. ಹರಿಕೃಷ್ಣ ತುಟಿ ಬಿಚ್ಚಿದ್ದಾರೆ….ಪತ್ನಿ ವಾಣಿ ಹರಿಕೃಷ್ಣ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ನೆಗಿಟೀವ್ ರೂಪ ಪಡೆದು ಸದ್ದು ಮಾಡುತ್ತಿದ್ದರೆ ಇತ್ತ ಹರಿಕೃಷ್ಣ ಕೂಲಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು ಹರಿಕೃಷ್ಣ ಅವರ ಪತ್ನಿ ವಾಣಿ ಹರಿಕೃಷ್ಣ , “ಬದುಕೇ ಬೇಡ ಅನ್ನಿಸಿಬಿಡುತ್ತದೆ , ಒಂದು
ಹಾಡೇ ಜೀವನವಲ್ಲ ಅಂತಾರೆ, ಆದರೆ ನನಗೆ ಎಷ್ಟೋ ಹಾಡುಗಳು ನನ್ನದಾಗುಳಿಯಲಿಲ್ಲ , ಈಗ ” ಕುರುಕ್ಷೇತ್ರ” ಹಾಗೂ ” ರಾಂಧವ” ಚಿತ್ರ ಗಳಲ್ಲಿ ನನ್ನನ್ನು ಹಾಡಿಸಿ , ಧ್ಧನಿ ಉಳಿಸಿಲ್ಲ , ನಮ್ಮನ್ನು ಹಾಡಿಸಲೇಬಾರದು ನಂತರ ಬೇರೆಯವರನ್ನು ಹಾಡಿಸುವುದಾದರೆ……” ಅಂತ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ವೊಂದನ್ನು ಹರಿ ಬಿಟ್ಟಿದ್ದರು. ರಾಂಧವ ಸಿನಿಮಾಕ್ಕೆ ಹರಿಕೃಷ್ಣ ಅವರ ಶಿಷ್ಯ ಶಶಾಂಕ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕುರುಕ್ಷೇತ್ರಕ್ಕೆ ಹರಿಕೃಷ್ಣ ಅವರದ್ದೇ ಸಂಗೀತ. ಈ ಎರಡೂ ಸಿನಿಮಾಗಳಿಗೆ ತನ್ನಿಂದ ಹಾಡಿಸಿ ನಂತರ ಬೇರೆಯವರಿಂದ ಪುನಃ ಹಾಡಿಸಿ ಅದನ್ನು ಬಳಸಿಕೊಂಡಿದ್ದಾರೆ ಎಂದು ವಾಣಿ ಆರೋಪಿಸಿ ಅಸಮಧಾನ ಹೊರಹಾಕಿರುವುದರಿಂದ ಹರಿಕೃಷ್ಣ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ಹರಿಕೃಷ್ಣ ಸ್ಪಷ್ಟನೆ ನೀಡಿದ್ದಾರೆಂದು ವರದಿಯಾಗಿದೆ.
ನಾವು ಚೆನ್ನಾಗಿಯೇ ಇದ್ದೇವೆ‌.‌ ನಮ್ಮ ನಡುವೆ ಎಲ್ಲವೂ ಚೆನ್ನಾಗಿಯೇ ಇದೆ. ವದಂತಿಗಳನ್ನು ನಂಬುವುದು ಬೇಡ..!ಆಕೆ ಬೇಜಾರಲ್ಲಿ ಪೋಸ್ಟ್ ಮಾಡಿದ್ದಾಳೆ. ಅದು ಈ ರೀತಿ ಟರ್ನ್ ಆಗಿದೆಯಷ್ಟೇ ಎಂದು ಹರಿಕೃಷ್ಣ ಸ್ಪಷ್ಟನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...