ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !

Date:

ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ”ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ.


ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ” ಎಂದು ಕಿಡಿಕಾರಿದ್ದಾರೆ.”ರಾಜ್ಯ ಸರ್ಕಾರವು ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...