ಬಲೆಗೆ ಬಿತ್ತು ಬರೋಬ್ಬರಿ 19 ಕೆಜಿ ತೂಕದ ಮೀನು

Date:

ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸೋಮವಾರ ಬರೋಬ್ಬರಿ 19 ಕೆ.ಜಿ ತೂಕದ ಕುರುಡೆ ಮೀನು ಏಂಡಿ ಬಲೆಗೆ ಬಿದ್ದಿದೆ.

ಕಾರವಾರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದರಿಂದ ಸಾಂಪ್ರದಾಯಿಕ ಮೀನುಗಾರಿಕೆಗೂ ಸಹ ನಿಷೇಧ ಹೇರಿದ್ದರಿಂದಾಗಿ ಯಾವುದೇ ದೋಣಿಗಳು ಸಮುದ್ರಕ್ಕೆ ಇಳಿಯುತ್ತಿಲ್ಲ.

ಆದರೆ ಸೋಮವಾರ ಮಳೆ ಕೊಂಚ ವಿರಾಮ ನೀಡಿದ ವೇಳೆಯಲ್ಲಿ ಸ್ಥಳೀಯ ಮೀನುಗಾರರು ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದರು. ದಡದಲ್ಲಿಯೇ ನಿಂತು ಬೀಸುವ ಏಂಡಿ ಬಲೆ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬಲೆಗೆ ಭಾರೀ ಗಾತ್ರದ ಕುರುಡೆ ಮೀನು ಸಿಲುಕಿದೆ.

ಬಲೆಗೆ ಸಿಲುಕಿದ ಮೀನು ಬರೋಬ್ಬರಿ 18 ಕೆ.ಜಿ 710 ಗ್ರಾಂ ತೂಕವಿದ್ದು, ಬಲೆ ಬೀಸಿದ ಮೀನುಗಾರರು ಫುಲ್ ಖುಷ್ ಆಗಿದ್ದಾರೆ. ಈ ಮೀನು ಹಿಡಿಯುತ್ತಿದ್ದಂತೆ ಅದನ್ನು ಗಮನಿಸಿದವರು ಕೆ.ಜಿಗೆ 600 ರೂಪಾಯಿ ಮೊತ್ತದಲ್ಲಿ ಒಟ್ಟೂ 8 ಸಾವಿರ ರೂಪಾಯಿ ನೀಡಿ ಖರೀದಿ ಮಾಡಿದ್ದಾರೆ.

ಸಾಮಾನ್ಯವಾಗಿ ಕುರುಡೆ ಮೀನು 20 ರಿಂದ 25 ಕೆ.ಜಿ ವರೆಗೂ ಬೆಳವಣಿಗೆ ಹೊಂದುತ್ತದೆ. ಆದರೆ ದಡದಲ್ಲಿ ಇಷ್ಟು ದೊಡ್ಡ ಪ್ರಮಾಣದ ಮೀನು ಬಲೆಗೆ ಬೀಳುವುದು ಅಪರೂಪವಾಗಿದೆ

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...