ಬಳ್ಳಾರಿಯಲ್ಲಿ ವರ್ಕೌಟ್ ಆಯ್ತು ಡಿಕೆಶಿ ಹೊಸ ಪ್ಲಾನ್..!

Date:

ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಕೈ ಗೆಲುವಿನ ಸೂತ್ರಧಾರಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಬಳ್ಳಾರಿ ಜಿಲ್ಲೆಯಲ್ಲಿ ಹೆಜ್ಜೆ ಹೆಜ್ಜೆಗೂ ಸಂಕಷ್ಟಗಳು ಎದುರಾಗುತ್ತಿವೆ.

ಪಕ್ಷದ ಮುಖಂಡರು ಒಗ್ಗಟ್ಟಾಗುತ್ತಿಲ್ಲ. ವೈಮನಸ್ಸನ್ನು ಸರಿಪಡಿಸಲು ನಡೆಸಿದ ಸಭೆಗಳು ಫಲ ನೀಡುತ್ತಿಲ್ಲ.

ಪಕ್ಷದ ಅಭ್ಯರ್ಥಿ ಪರ ಒಟ್ಟಾಗಿ ಪ್ರಚಾರ ನಡೆಸದೆ ಇರುವುದು ತೀವ್ರ ಇರಿಸು-ಮುರಿಸಾಗುತ್ತದೆ. ಅಲ್ಲದೆ, ಈ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರೇ ಬಡಿದಾಡಿಕೊಂಡಿರುವುದು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ರೀತಿಯ ಗೊಂದಲ ಉಂಟಾಗಿದೆ.

ಈ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಪಕ್ಷವನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆ ಹೊತ್ತು ಡಿ.ಕೆ.ಶಿವಕುಮಾರ್ ಅವರು ಪ್ರಯತ್ನ ಮುಂದುವರಿಸಿದ್ದಾರೆ.

ಈಗಾಗಲೇ ತುಕಾರಂ, ಪಿ.ಟಿ.ಪರಮೇಶ್ವರ್ ನಾಯಕ್ ಅವರಿಗೆ ಸಚಿವ ಸ್ಥಾನವನ್ನೇನೋ ನೀಡಿದ್ದಾರೆ. ಆದರೆ, ಇದು ಶಾಶ್ವತವಲ್ಲ ಎನ್ನುವುದನ್ನು ಪ್ರಚಾರ ಸಭೆಗಳಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ.

ಈ ಮೂಲಕ ಈಗಾಗಲೇ ಸಚಿವ ಸ್ಥಾನ ಹೊಂದಿದವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಲೀಡ್ ತರಬೇಕು. ಕಳೆದ ಉಪ ಚುನಾವಣೆಯಲ್ಲಿದ್ದ ಪರಿಸ್ಥಿತಿಯನ್ನೇ ಮುಂದುವರಿಸಿಕೊಂಡು ಹೋಗಬೇಕು.

 

ಇನ್ನೇನು ಸಚಿವ ಸ್ಥಾನ ಸಿಕ್ಕಿದೆಯಲ್ಲ ಎಂದು ನಿರ್ಲಕ್ಷಿಸಿದರೆ ಸಚಿವ ಸ್ಥಾನಕ್ಕೆ ಖೋತಾ ಬೀಳುವ ಸಾಧ್ಯತೆಯಿದೆ ಎಂಬ ಡಿಕೆಶಿ ಎಚ್ಚರಿಕೆ ರವಾನಿಸಿದ್ದಾರೆ. ಈ ಕುರಿತು ಹಡಗಲಿ ಪ್ರಚಾರ ಸಭೆಯಲ್ಲಿ ಸಚಿವ ಪಿ.ಟಿ.ಪರಮೇಶ್ವರ್ ಮುಂದೆಯೇ ಸೂಚ್ಯವಾಗಿ ಡಿಕೆಶಿ ಮಾತನಾಡಿ, ಪರಮೇಶ್ವರ್ ನಾಯಕ್ ಕ್ಷೇತ್ರದಾದ್ಯಂತ ಓಡಾಡಿ ಹೆಚ್ಚು ಲೀಡ್ ತರಬೇಕು ಎಂದು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದು ರೊಟೇಷನ್ ರೀತಿ ಕೊಡಲಾಗುವುದು ಎಂದು ಡಿಕೆಶಿ ಅವರು ಸಂಡೂರು ಸಭೆಯಲ್ಲಿನ ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಸಚಿವಾಕಾಂಕ್ಷಿ ಕೈ ಶಾಸಕರಿಗೆ ಮತ್ತೊಂದು ಚಾನ್ಸ್ ದೊರೆತಂತಾಗಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮಾನಾಯ್ಕ್ ಅವರುಗಳು ಡಿಕೆಶಿ ನೀಡಿರುವ ಟಾಸ್ಕ್ ಗೆ ಒಪ್ಪಿಗೆ ಸೂಚಿಸಿದಂತಿದೆ.

ನಾಮಪತ್ರ ಸಲ್ಲಿಸುವವರೆಗೆ ಅಂತರ ಕಾಯ್ದುಕೊಂಡಿದ್ದ ನಾಗೇಂದ್ರ ಹಾಗೂ ಮಾಜಿ ಶಾಸಕ ಸಿರಾಜ್ ಶೇಖ್ ವಿರುದ್ಧ ಹರಿಹಾಯ್ದು, ಪಕ್ಷದಿಂದ ವಜಾಗೊಳಿಸಬೇಕು. ಅಲ್ಲಿಯವರೆಗೆ ಪ್ರಚಾರ ಮಾಡೋದಿಲ್ಲವೆಂದಿದ್ದ ಭೀಮಾನಾಯ್ಕ್ ಇದೀಗ ಆಯಕ್ಟಿವ್ ಆಗಿ ಕೈ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಪ್ರಚಾರ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...