ಬಹುಮುಖ ಪ್ರತಿಭೆಯ ರಂಗಕರ್ಮಿ, ಶ್ರೀ ವಿ. ರಾಮಮೂರ್ತಿ ಅವರ ನಿಧನ

Date:

ಭಾರತೀಯ ರಂಗಭೂಮಿ ಕಂಡ ಶ್ರೇಷ್ಠ ಬೆಳಕಿನ ತಜ್ಞ, ಬಹುಮುಖ ಪ್ರತಿಭೆಯ ರಂಗಕರ್ಮಿ, ಶ್ರೀ ವಿ. ರಾಮಮೂರ್ತಿ ಅವರ ನಿಧನಕ್ಕೆ ಅರಣ್ಯ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ಪಡಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಬಹು ಮುಖ್ಯ ರಂಗಕರ್ಮಿ ಎಂದು ಗುರುತಿಸಿಕೊಂಡಿದ್ದವರು ರಾಮಮೂರ್ತಿ. ಅವರು ರಂಗಭೂಮಿಯ ಬೆಳಕಿನ ಸಂಯೋಜನೆ ಗೆ ಹೊಸ ಆಯಾಮ ಕೊಟ್ಟವರು.

 

 

ಜೊತೆಗೆ ಅಸಂಖ್ಯಾತ ರಂಗ ಶಿಬಿರಗಳ ಮೂಲಕ ಕನ್ನಡ ರಂಗಭೂಮಿಗೆ ನೂರಾರು ಪ್ರತಿಭಾನ್ವಿತ ಹೊಸ ಕಲಾವಿದರನ್ನು ಕೊಡುಗೆಯಾಗಿ ನೀಡಿದವರು.
ಭಾರತ ಯಾತ್ರಾ ಕೇಂದ್ರ ಹಾಗೂ ಪ್ರಯೋಗರಂಗ ಗಳ ಜೊತೆ ನಿಕಟ ಒಡನಾಟ ಇಟ್ಟುಕೊಂಡಿದ್ದ ರಾಮಮೂರ್ತಿ, ರಂಗಭೂಮಿಯ ಎಲ್ಲಾ ಪ್ರಕಾರಗಳಲ್ಲಿಯೂ ಹಿಡಿತ ಹೊಂದಿದ್ದರು.
ರಂಗಭೂಮಿಯ ಬೆಳಕಿನ ಕಿರಣ ಎಂದೇ ಹೆಸರಾಗಿದ್ದ ರಾಮಮೂರ್ತಿ ಅವರ ನಿಧನದಿಂದ ಕನ್ನಡ ರಂಗಭೂಮಿ ಬಹುದೊಡ್ಡ ನಷ್ಟ ಅನುಭವಿಸಿದೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...