No menu items!
16.6 C
Munich
Monday, July 6, 2026

ಬಾಂಬ್‌ ಬೆದರಿಕೆ: ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ!

Must read

 

ತಿರುವನಂತಪುರಂ:- ಬಾಂಬ್ ಬೆದರಿಕೆ ಹಿನ್ನೆಲೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article