ಬಾಂಬ್ ಬ್ಲಾಸ್ಟ್ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು !

Date:

ಮೈಸೂರು: ಮಾಸ್ಕ್, ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್ನಲ್ಲಿ ಬಂದಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿಸಿದ್ದಾರೆ. ಪ್ರಾಣಾಪಾಯದಿಂದ ಕೆಲವರು ಪಾರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನೆನ್ನೆಯೇ ಡಿಸಿಎಂ, ಹೋಂ ಮಿನಿಸ್ಟರ್ ಘಟನಾ ಸ್ಥಳಕ್ಕೆ ವಿಸಿಟ್ ಮಾಡಿದ್ದಾರೆ‌. ನಾನು ಕೂಡ ಈವತ್ತು ಆಸ್ಪತ್ರೆಗೆ ಹಾಗೂ ಸ್ಥಳಕ್ಕೆ ಹೋಗುತ್ತೇನೆ. ಇದು ಸಂಘಟನೆಯ ಕೆಲಸವೋ ಇಲ್ಲವೋ ಗೊತ್ತಿಲ್ಲ. ಸೀರಿಯಸ್ ಆಗಿ ತನಿಖೆ ನಡೆಯುತ್ತಿದೆ ಎಂದರು.
ಅಲ್ಪ ಸಂಖ್ಯಾತರ ಓಲೈಕೆಗಾಗಿ ಈ ರೀತಿ ನಡೆದಿದೆ ಎಂದಿರುವ ಬಿಜೆಪಿಗೆ ತಿರುಗೇಟು ನೀಡಿರುವ ಅವರು.. ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗೂ ಬೆಂಗಳೂರು ಬ್ಲಾಸ್ಟ್ಗೆ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನ ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...