No menu items!
17.4 C
Munich
Friday, August 21, 2026

ಬಾಂಬ್ ಬ್ಲಾಸ್ಟ್ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು !

Must read

ಮೈಸೂರು: ಮಾಸ್ಕ್, ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್ನಲ್ಲಿ ಬಂದಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿಸಿದ್ದಾರೆ. ಪ್ರಾಣಾಪಾಯದಿಂದ ಕೆಲವರು ಪಾರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನೆನ್ನೆಯೇ ಡಿಸಿಎಂ, ಹೋಂ ಮಿನಿಸ್ಟರ್ ಘಟನಾ ಸ್ಥಳಕ್ಕೆ ವಿಸಿಟ್ ಮಾಡಿದ್ದಾರೆ‌. ನಾನು ಕೂಡ ಈವತ್ತು ಆಸ್ಪತ್ರೆಗೆ ಹಾಗೂ ಸ್ಥಳಕ್ಕೆ ಹೋಗುತ್ತೇನೆ. ಇದು ಸಂಘಟನೆಯ ಕೆಲಸವೋ ಇಲ್ಲವೋ ಗೊತ್ತಿಲ್ಲ. ಸೀರಿಯಸ್ ಆಗಿ ತನಿಖೆ ನಡೆಯುತ್ತಿದೆ ಎಂದರು.
ಅಲ್ಪ ಸಂಖ್ಯಾತರ ಓಲೈಕೆಗಾಗಿ ಈ ರೀತಿ ನಡೆದಿದೆ ಎಂದಿರುವ ಬಿಜೆಪಿಗೆ ತಿರುಗೇಟು ನೀಡಿರುವ ಅವರು.. ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗೂ ಬೆಂಗಳೂರು ಬ್ಲಾಸ್ಟ್ಗೆ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನ ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -spot_img

More articles

- Advertisement -spot_img

Latest article