ಬಾಣಂತಿಯರಿಗೆ ಈ 4 ಲಸಿಕೆಗಳು ಸುರಕ್ಷಿತ

Date:

”ಕೋವಿಡ್‌ ವಿರುದ್ದದ ಭಾರತ ಸರ್ಕಾರ ಅನುಮೋದಿಸಿರುವ ನಾಲ್ಕು ಲಸಿಕೆಗಳಾದ ಕೋವಾಕ್ಸಿನ್, ಕೋವಿಶೀಲ್ಡ್, ಸ್ಪುಟ್ನಿಕ್ ವಿ ಮತ್ತು ಮಾಡರ್ನಾ ಹಾಲುಣಿಸುವ ತಾಯಂದಿರಿಗೆ ಸುರಕ್ಷಿತವಾಗಿದೆ,” ಎಂದು ಹೇಳಿದ ನೀತಿ ಆಯೋಗದ ಸದಸ್ಯರಾದ ಡಾ.ವಿ.ಕೆ. ಪೌಲ್‌, ಈ ಸಂದರ್ಭದಲ್ಲೇ ಲಸಿಕೆಗೂ, ”ಬಂಜೆತನಕ್ಕೂ ಯಾವುದೇ ಸಂಬಂಧವಿಲ್ಲ,” ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಕೊರೊನಾವೈರಸ್ ಕುರಿತು ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ಪೌಲ್‌, ಸಂತಾನೋತ್ಪತ್ತಿ ವಯಸ್ಸಿನ ಜನಸಂಖ್ಯೆಯಲ್ಲಿ ಕೋವಿಡ್‌ ಲಸಿಕೆಯ ಕಾರಣದಿಂದಾಗಿ ಬಂಜೆತನದ ಬಗ್ಗೆ ಮಾಧ್ಯಮ ವರದಿಗಳ ಬಗ್ಗೆ ಕಳವಳಗೊಳ್ಳದಂತೆ ತಿಳಿಸಿದ್ದಾರೆ.
ಕೋವಿಡ್‌ ಲಸಿಕೆಗಳು ಸುರಕ್ಷಿತವಾಗಿದೆ. ಹಾಲುಣಿಸುವ ಎಲ್ಲ ಮಹಿಳೆಯರಿಗೆ ಶಿಫಾರಸು ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಗಾಗ ಪ್ರಕಟಣೆಯಲ್ಲಿ ತಿಳಿಸಿದೆ.


ಭಾರತ್ ಬಯೋಟೆಕ್‌ನ ಕೋವಾಕ್ಸಿನ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸುತ್ತಿರುವ ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾದ ಕೋವಿಶೀಲ್ಡ್‌ಗೆ ಜನವರಿಯಲ್ಲಿ ಅನುಮೋದನೆ ನೀಡಲಾಗಿದೆ. ಭಾರತದಲ್ಲಿ ಡಾ. ರೆಡ್ಡಿ ಪ್ರಯೋಗಾಲಯಗಳು ಮಾರಾಟ ಮಾಡುತ್ತಿರುವ ರಷ್ಯಾದ ಸ್ಪುಟ್ನಿಕ್ ವಿ ಗೆ ಎಪ್ರಿಲ್‌ನಲ್ಲಿ ಅನುಮೋದನೆ ನೀಡಲಾಗಿದೆ.
ಮಾಡರ್ನಾದ ಕೋವಿಡ್‌ ಲಸಿಕೆಯನ್ನು ಭಾರತದ ಔಷಧ ನಿಯಂತ್ರಕ ಮಂಡಳಿ (ಡಿಸಿಜಿಐ) ನಿಂದ ತುರ್ತು ಬಳಕೆಯ ಅನುಮತಿ ನೀಡಲಾಗಿದೆ ಎಂದು ಸರ್ಕಾರ ಇಂದು (ಜೂನ್‌ 29) ದೃಢಪಡಿಸಿದೆ.


ಈ ಹಿಂದೆ ಜೂನ್ 25 ರಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ರೋಗನಿರೋಧಕ (ಎನ್‌ಟಿಎಜಿಐ) ಕಾರ್ಯಕಾರಿ ಗುಂಪಿನ ಅಧ್ಯಕ್ಷ ಡಾ.ನರೇಂದ್ರ ಕುಮಾರ್ ಅರೋರಾ ಕೋವಿಡ್‌ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದ್ದರು.
“ಪೋಲಿಯೊ ಲಸಿಕೆ ಬಂದಾಗ ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಈ ರೀತಿಯ ವದಂತಿಯನ್ನು ಹರಡಲಾಗಿತ್ತು. ಆ ಸಮಯದಲ್ಲಿ, ಪೋಲಿಯೊ ಲಸಿಕೆ ಪಡೆಯುತ್ತಿರುವ ಮಕ್ಕಳು ಭವಿಷ್ಯದಲ್ಲಿ ಬಂಜೆತನವನ್ನು ಎದುರಿಸಬಹುದು ಎಂಬ ತಪ್ಪು ಮಾಹಿತಿ ಸೃಷ್ಟಿಸಲಾಗಿತ್ತು. ಲಸಿಕೆ ವಿರೋಧಿ ಲಾಬಿಯಿಂದ ಈ ರೀತಿಯ ತಪ್ಪು ಮಾಹಿತಿಯು ಹರಡುತ್ತದೆ,” ಎಂದು ಹೇಳಿದ್ದರು.
“ಎಲ್ಲಾ ಲಸಿಕೆಗಳು ತೀವ್ರವಾದ ವೈಜ್ಞಾನಿಕ ಸಂಶೋಧನೆಗಳ ಬಳಿಕ ಬಳಕೆಗೆ ಅನುಮತಿ ನೀಡಲಾಗುತ್ತದೆ ಎಂದು ನಾವು ತಿಳಿದಿರಬೇಕು. ಯಾವುದೇ ಲಸಿಕೆಗಳು ಈ ರೀತಿಯ ಅಡ್ಡಪರಿಣಾಮವನ್ನು ಹೊಂದಿಲ್ಲ. ಈ ಬಗ್ಗೆ ನಾನು ಭರವಸೆ ನೀಡಬಲ್ಲೆ. ನಮ್ಮನ್ನು, ಕುಟುಂಬ ಮತ್ತು ಸಮಾಜವನ್ನು ಕೊರೊನಾ ವೈರಸ್‌ನಿಂದ ರಕ್ಷಿಸುವುದು ಈ ಸಂದರ್ಭದಲ್ಲಿ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ, ಎಲ್ಲರೂ ಮುಂದೆ ಬಂದು ಲಸಿಕೆ ಪಡೆಯಬೇಕು,” ಎಂದು ಮನವಿ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...