ಬಿಎಸ್‍ವೈಗೆ ಲಿಂಗಾಯತರಲ್ಲಿ ಮಾನ್ಯತೆಯಿಲ್ಲ ಎಂದ ಆರ್.ವಿ.ತಿಮ್ಮಾಪೂರ್

Date:

ಅಧಿಕ ಸಂಖ್ಯೆಯಲ್ಲಿ ಲಿಂಗಾಯತ ಸಂಸದರಿದ್ದರೂ, ಒಬ್ಬ ಸಂಸದರನ್ನೂ ಮಂತ್ರಿ ಮಾಡದ ಯಡಿಯೂರಪ್ಪನವರಿಗೆ ಲಿಂಗಾಯತರು ಮಾನ್ಯತೆ ನೀಡುತ್ತಿಲ್ಲ ಎಂದು ಸಚಿವ ಆರ್.ವಿ.ತಿಮ್ಮಾಪೂರ್ ಹೇಳಿದ್ದಾರೆ.

ವೀರಶೈವ ಲಿಂಗಾಯತರು ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂದು ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿಯಲ್ಲಿ ಮೊದಲಿನ ಮಾನ್ಯತೆ ಸಿಗುತ್ತಿಲ್ಲ. ಈಗ ಲಿಂಗಾಯತರು ಅವರ ಬೆನ್ನ ಹಿಂದೆ ಇಲ್ಲ. ಯಡಿಯೂರಪ್ಪಗೆ ವಯಸ್ಸಾಯಿತು.

ನಮ್ಮ ಹಿತ ಕಾಯಲು ಸಾಧ್ಯವಿಲ್ಲ ಎಂದು ಗೊತ್ತಾಗಿದೆ ಹಾಗಾಗಿ ವೀರಶೈವ ಲಿಂಗಾಯತ ಕಾಂಗ್ರೆಸ್ ಪರವಾಗಿದೆ ಎಂದರು. ಮೇ 23ರ ನಂತರ ಕೇಂದ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ತಿಳಿದರು.ಎಚ್.ಡಿ.ರೇವಣ್ಣ ಸಿಎಂ ಆಗಲು ಅರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೋ ಸಂದರ್ಭದಲ್ಲಿ ಆ ರೀತಿ ಹೇಳಿರಬಹುದು. ಆದರೆ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿ ಎಂದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...