ಅಸಮಾಧಾನ ಇದ್ದವ್ರು ದೆಹಲಿಗೆ ಹೋಗಿ ಮಾತಾಡಲಿ ಅಂದ್ರು ಬಿಎಸ್ ವೈ

Date:

ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಇಂದು ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿ ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಳ್ಳುವದರ ಜೊತೆ ಸಿಡಿ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸತೀಶ್ ರೆಡ್ಡಿ, ತಿಪ್ಪಾರೆಡ್ಡಿ, ಅರವಿಂದ್ ಬೆಲ್ಲದ್, ರೇಣುಕಾಚಾರ್ಯ, ಸಿದ್ದು ಸವದಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಅಸಮಾಧಾನವನ್ನ ಹೊರ ಹಾಕಿದ್ದಾರೆ. ಈ ನಡುವೆ ಎಂಎಲ್‍ಸಿ ಹೆಚ್. ವಿಶ್ವನಾಥ್, ಸಿಎಂ ಕೊಟ್ಟ ಮಾತು ತಪ್ಪುವ ಮೂಲಕ ವಚನಭ್ರಷ್ಟರಾಗಿದ್ದಾರೆ. 17 ಜನರ ಭಿಕ್ಷೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರೋದನ್ನ ಮರೆತ ಹಾಗೆ ಕಾಣಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...