ಬಿಕ್ಲು ಶಿವ ಹತ್ಯೆ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಬೈರತಿ ಬಸವರಾಜ್’ಗೆ ಸೂಚನೆ

Date:

ಬಿಕ್ಲು ಶಿವ ಹತ್ಯೆ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಬೈರತಿ ಬಸವರಾಜ್’ಗೆ ಸೂಚನೆ
ಬೆಂಗಳೂರು: ಬಿಕ್ಲು ಶಿವ ಅಲಿಯಾಸ್ ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ರಾಜಕೀಯ ತಿರುವು ಕಂಡುಬಂದಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಶಾಸಕರು ಸಲ್ಲಿಸಿದ್ದ ಎಫ್ಐಆರ್ ರದ್ದತಿ ಹಾಗೂ ನೋಟಿಸ್ ರದ್ದುಪಡಿಸುವ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಅವರು ವಿಚಾರಣೆಗೆ ಹಾಜರಾಗಬೇಕೆಂದು ಸ್ಪಷ್ಟ ಆದೇಶ ನೀಡಿದೆ.
ಈ ಕುರಿತಂತೆ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ನೇತೃತ್ವದ ಪೀಠ, ಶಾಸಕರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿ, ತನಿಖಾ ಅಧಿಕಾರಿಗಳಿಗೆ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ಜಾರಿಗೆ ಸಂಪೂರ್ಣ ಅವಕಾಶ ನೀಡಿದೆ.
ಪೊಲೀಸರ ದಿಢೀರ್ ತಯಾರಿ
ಹೈಕೋರ್ಟ್ನ ಈ ನಿರ್ಣಯದ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದು, ಬಿಗಿ ಭದ್ರತೆ ಹಾಗೂ ಕ್ರಮಗಳ ಬಗ್ಗೆ ಸಮಾಲೋಚನೆ ನಡೆದಿದೆ. ಇದೀಗ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಅವರು ಇಂದು ಬೆಳಗ್ಗೆ 11:30ಕ್ಕೆ ಕೆಜಿಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ಮುಂದೆ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...