No menu items!
13.7 C
Munich
Saturday, July 11, 2026

ಬಿಗ್ ಬಾಸ್ ಗೆ ಹೋಗಬೇಕು ಎಂದು ಕಿಚ್ಚನ ಮನೆ ಎದುರು ವ್ಯಕ್ತಿಯ ಹೈಡ್ರಾಮ

Must read

ಬೆಂಗಳೂರು: ಕಿಚ್ಚನ ಮನೆ ಮುಂದೆ ವ್ಯಕ್ತಿಯೊಬ್ಬನ ಅತಿರೇಕದ ವರ್ತನೆ ಕಂಡು ಸೆಕ್ಯೂರಿಟಿ ಗಾರ್ಡ್ ಗಳು ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿ ಕೊಡಿ ಅಂತ ರಾತ್ರೋ ರಾತ್ರಿ ಕಿಚ್ಚನ ಮನೆ ಮುಂದೆ ವ್ಯಕ್ತಿಯೊಬ್ಬ ಹೈ ಡ್ರಾಮ ಮಾಡಿದ್ದಾನೆ.
ಚಾನ್ಸ್ ಕೇಳೋಕೆ ಅಂತ ಎತ್ತಿನ ಗಾಡಿ ಮೂಲಕ ಬಂದಿರೋ ಮಂಜು ಅನ್ನೋ ವ್ಯಕ್ತಿ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ 10ಗಂಟೆವರೆಗೂ ಸುದೀಪ್ ಮನೆ ಮುಂದೆ ಕಾದು ನಿಂತಿದ್ದಾನೆ. ಟಿ ನರಸಿಪುರದಿಂದ ಬಂದಿದಿನಿ ಅಂತ ಹೇಳಿದ್ದ ಮಂಜು, ನಾವು ಅನಕ್ಷರಸ್ತರು ರೈತರು ಬಿಗ್ ಬಾಸ್ ಹೋಗಲು ಅವಕಾಶ ಕೊಡಿ ಅಂತ ಎತ್ತಿನ ಗಾಡಿ ತಂದು ಸುದೀಪ್ ಮನೆ ಮುಂದೆ ನಿಲ್ಲಿಸಿದ್ದ. ನಂತರ ಸುದೀಪ್ ಮನೇಲಿಲ್ಲ ಚೆನ್ನೈ ಹೋಗಿದ್ದಾರೆ ಅಂತ ಹೇಳಿ ಸೆಕ್ಯುರಿಟಿ ಮನವಿ ಮಾಡಿ ಕಳಿಸಿದ್ದಾರೆ.
ಮಂಜು ಹೇಳುವ ಪ್ರಕಾರ ಮನೆಯೊಳಗಿದ್ದ ವ್ಯಕ್ತಿಯೊಬ್ಬ ಮಂಜುಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿದ್ರಂತೆ. ಧಮಾಕಿ ಸಹ ಹಾಕಿದ್ದಾರೆ ಅಂತ ಆರೋಪಿಸಿದ್ದಾನೆ. ಎತ್ತಿನ ಗಾಡಿಗೆ ಬ್ಯಾನರ್ ಕಟ್ಕೊಂಡ್ ಬಂದು ಜೆಪಿ ನಗರದ ಸುದೀಪ್ ಮನೆ ಮುಂದೆ ಗಾಡಿ ನಿಲ್ಲಿಸಿದ್ದ ಮಂಜುಗೆ ಬುದ್ದಿ ಹೇಳಿ ಕಳಿಸಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.

- Advertisement -spot_img

More articles

- Advertisement -spot_img

Latest article