ಬಿಜೆಪಿ ಸರ್ಕಾರ ರಚಿಸಲು ನೆರವಾದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಅಳಿಯನಿಗೆ ಆಯಕಟ್ಟಿನ ಹುದ್ದೆ ನೀಡಲಾಗಿದೆ.ಹೆಚ್. ವಿಶ್ವನಾಥ್ ಅವರ ಅಳಿಯ ಹೆಚ್.ಸಿ. ರಮೇಂದ್ರ ಅವರಿಗೆ ಲೋಕೋಪಯೋಗಿ ಇಲಾಖೆ ಬೆಂಗಳೂರು ದಕ್ಷಿಣ ವಲಯ ಸಂಪರ್ಕ ಮತ್ತು ಕಟ್ಟಡಗಳ ವಿಭಾಗದ ಮುಖ್ಯ ಇಂಜಿನಿಯರ್ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಅಧೀಕ್ಷಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಮೇಂದ್ರ ಅವರನ್ನು ಆಯಕಟ್ಟಿನ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು ಈ ಮೂಲಕ ವಿಶ್ವನಾಥ್ ಅವರಿಗೆ ಬಳುವಳಿ ನೀಡಲಾಗಿದೆ ಎಂದು ಹೇಳಲಾಗಿದೆ.