No menu items!
9.6 C
Munich
Wednesday, April 15, 2026

ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ; ಸಿದ್ದರಾಮಯ್ಯ

Must read

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ.
ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ. ಬಿಜೆಪಿಯ 25 ಸಂಸದರಿದ್ದಾರಲ್ಲ ಚರ್ಚಿಸಿ ಅನುದಾನ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

- Advertisement -spot_img

More articles

- Advertisement -spot_img

Latest article