No menu items!
12 C
Munich
Thursday, May 7, 2026

ಬಿಜೆಪಿ ಅವಧಿಯಲ್ಲಿ ಆಗಿದ್ದ ಕಾನೂನು ಲೋಪವನ್ನು ನಮ್ಮ ಸರ್ಕಾರ ಸರಿ ಮಾಡಿದೆ !

Must read

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಕಾನೂನು ಲೋಪವನ್ನು ನಮ್ಮ ಸರ್ಕಾರ ಸರಿ ಮಾಡಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯುವ ಸರ್ಕಾರದ ನಡೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜಕೀಯ ಪ್ರೇರಿತ ಅಲ್ಲ.
ಯಡಿಯೂರಪ್ಪ ಅವರು ಮೌಖಿಕ ನಿರ್ದೇಶನ ಕೊಟ್ಟು ಸಿಬಿಐಗೆ ಕೇಸ್ ಕೊಡಿ ಎಂದು ಸಿಎಸ್ಗೆ ಮೌಖಿಕ ಆದೇಶ ಕೊಟ್ಟಿದ್ದು ರಾಜಕೀಯ ಪ್ರೇರಿತ ಅಲ್ಲವಾ? ನಾವು ಮಾಡಿರೋದು ಕಾನೂನಿನ ಚೌಕಟ್ಟಿನಲ್ಲಿ. ಅಂದಿನ ಅಡ್ವೊಕೇಟ್ ಜನರಲ್ ಅವರು ಹೇಳಿದ್ರು, ಈಗ ನಮ್ಮ ಎಜಿ ಅವರು ನಮಗೆ ಅದನ್ನು ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ನಮ್ಮ ಇತಿಮಿತಿಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ ಇದು ರಾಜಕೀಯ ಪ್ರೇರಿತ ಅಲ್ಲ ಎಂದಿದ್ದಾರೆ.
ರಾಜಕೀಯ ಪ್ರೇರಿತ ಬಿಜೆಪಿ ಅವರು ಮಾಡಿದಾಗ ಒಂದು, ನಾವು ಮಾಡಿದಾಗ ಒಂದು ಆಗೋದಿಲ್ಲ. ಎಲ್ಲವೂ ಒಂದೇ ರೀತಿ ಆಗುತ್ತೆ. ಸರ್ಕಾರ ಕೇಸ್ ವಾಪಸ್ ಪಡೆದಿದೆ. ಮುಂದೆ ಏನ್ ಆಗುತ್ತೆ ಗೊತ್ತಿಲ್ಲ. ನಾವು ಕೋರ್ಟ್ಗೆ ಕ್ಯಾಬಿನೆಟ್ ನಿರ್ಧಾರ ಸಲ್ಲಿಕೆ ಮಾಡ್ತೀವಿ. ಕಾನೂನು ಚೌಕಟ್ಟಿನಲ್ಲಿ ಏನಾಗಿದೆ ಅಂತ ಕೋರ್ಟ್ಗೆ ತಿಳಿಸುತ್ತೇವೆ. ಮುಂದೆ ಕೋರ್ಟ್, ಸಿಬಿಐ ಏನು ಮಾಡುತ್ತೆ ಅವರಿಗೆ ಬಿಟ್ಟ ವಿಚಾರ. ನಾವು ಅದರ ಬಗ್ಗೆ ಮೊದಲೇ ಮಾತಾಡೋದು ಸರಿಯಲ್ಲ ಎಂದರು.

- Advertisement -spot_img

More articles

- Advertisement -spot_img

Latest article