ಬಿಜೆಪಿ ತಾಕತ್ತಿಗೆ ಬಂಡೆಪ್ಪ ಕಾಶಂಪೂರ್ ಓಪನ್ ಚಾಲೆಂಜ್..!

Date:

ನಿಮಗೆ ತಾಕತ್ತಿದ್ರೆ ಸರ್ಕಾರ ಉರುಳಿಸಿ. ಮೇ 23ರಲ್ಲ ಇನ್ನೂ 8 ದಿನ ತೆಗೆದುಕೊಳ್ಳಿ ಎಂದು ಬಿಜೆಪಿಯವರಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲು ಹಾಕಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗದಿದ್ದರೆ ಬಿಜೆಪಿಯವರು ರಾಜೀನಾಮೆ ಕೊಡುತ್ತಾರಾ ಎಂದು ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಹುಲ್ ಗಾಂಧಿ ಮತ್ತು ದೇವೇಗೌಡರ ಒಪ್ಪಂದದಂತೆ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇನ್ನೂ ನಾಲ್ಕು ವರ್ಷ ನಿರಾತಂಕವಾಗಿ ಸರ್ಕಾರ ನಡೆಯಲಿದೆ. ಮೇ 23ರ ನಂತರ ಬಿಜೆಪಿಯವರ ಎಲ್ಲಾ ದಾರಿ ಬಂದ್ ಆಗಲಿದೆ.

ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಎರಡು ಉಪಚುನಾವಣೆ ನಾವೇ ಗೆಲ್ಲುತ್ತೇವೆ.ಇಬ್ಬರು ಪಕ್ಷೇತರರು ನಮ್ಮ ಕಡೆಯೇ ಇದ್ದಾರೆ. ನಮ್ಮ ಸರ್ಕಾರಕ್ಕೆ ಏನು ಆಗುವುದಿಲ್ಲ ಎಂದರು.

ಬಿಜೆಪಿಯವರ ಎಲ್ಲಾ ಡೆಡ್‍ಲೈನ್‍ಗಳು ಮುಗಿದು ಹೋಗಿವೆ. ಸರ್ಕಾರದಲ್ಲಿರುವ ನಾವೇನು ಗೋಲಿ ಆಡ್ತಿರ್ತಿತೀವಾ ಎಂದರು. ಜೆಡಿಎಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆಳ ಹಂತದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದವರಾಗಲೀ, ಜೆಡಿಎಸ್ ಪಕ್ಷದವರಾಗಲಿ ಮನೆಯಲ್ಲಿ ಮಾತನಾಡಬೇಕು. ಯಾರೂ ಕೂಡ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...