“ಬಿಜೆಪಿ ಸಂಸದರೆಲ್ಲರೂ ನರಸತ್ತವರು, ಶಿಖಂಡಿಗಳು” ಎಂದ ಕಳಸಾ ಬಂಡೂರಿ ಹೋರಾಟಗಾರ

Date:

ಬೆಳಗಾವಿ: ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ. ಬಿಜೆಪಿ ಎಲ್ಲಾ ಸಂಸದರು ನರಸತ್ತವರು, ಇವರೆಲ್ಲಾ ಶಿಖಂಡಿಗಳು ಎಂದು ಕಳಸಾ ಬಂಡೂರಿ ಹೋರಾಟಗಾರ ವಿಜಯ್ ಕುಲಕರ್ಣಿ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಕುಲಕರ್ಣಿ, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ಬಲಿ ಕೊಡುತ್ತಲೇ ಬಂದಿವೆ. ನಾವು ರಾಜ್ಯದಿಂದ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಮಹದಾಯಿ ವಿವಾದ ಬಗೆಹರಿಯುತ್ತೆ ಅಂತ ಆಶಾಭಾವನೆಯನ್ನು ಇಟ್ಟಿಕೊಂಡಿದ್ದೆವು. ಆದರೆ ಇನ್ನು ಈ ವಿವಾದಕ್ಕೆ ಪರಿಹಾರ ಸಿಕ್ಕಿಲ್ಲ. ಆದರೂ ನಾವೆಲ್ಲಾ ಇಂದಿನವರೆಗೂ ಶಾಂತಿಯಿಂದ ಹೋರಾಟ ನಡೆಸಿದ್ದೇವೆ. ಆದರೆ ಇನ್ನು ಮುಂದೆ ನಮ್ಮ ಹೋರಾಟ ಉಗ್ರ ರೂಪ ತಾಳಲಿದೆ. ಅದಕ್ಕಾಗಿ ನಾವು ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.ಇನ್ನು ಪ್ರಹ್ಲಾದ ಜೋಶಿಯವರು ಸಂಸದೀಯ ಸಚಿವರಾಗಿದ್ದರೂ ಯಾವದೇ ಪ್ರಯೋಜನವಿಲ್ಲ. ಇವರು ಕುಡಿಯೋದು ಮಲಪ್ರಭಾ ನೀರನ್ನೇ ಆದರೂ ಕಾಮಗಾರಿ ಆಗಬಾರದೆಂಬ ಉದ್ದೇಶ ಅವರದ್ದಾಗಿದೆ. ಅಷ್ಟೇ ಅಲ್ಲ ನೀರು ಕೊಡುವವರೆಗೆ ರೈತರು ತಾವು ಪಡೆದ ಸಾಲವನ್ನು ಕೊಡುವುದಿಲ್ಲ. ನಾನು ಕಳಸಾ ಬಂಡೂರಿ ನಾಲಾದ ಮೂರು ಬೊಗಸೆ ನೀರು ಕುಡಿದು ಸಾಯಬೇಕು ಅಂದುಕೊಂಡಿದ್ದೆ ಈಗ ಈ ಎಲ್ಲ ಸಂಸದರ ಬಾಯಿಗೆ ಮೂರು ಹಿಡಿ ಮಣ್ಣು ಹಾಕಿ ಸಾಯುತ್ತೇನೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...