ಬಿಜೆಪಿ ಸರ್ಕಾರ ರಚನೆ, ದೇವರ ಮೊರೆ ಹೋದ್ರು ಯಡಿಯೂರಪ್ಪ .

Date:

ರಾಜ್ಯದ ರಾಜಕೀಯ ಬೆಳವಣಿಗೆ, ಸುಪ್ರೀಂ ಕೋರ್ಟ್ ತೀರ್ಪು, ವಿಶ್ವಾಸಮತ ಯಾಚನೆ ಕುರಿತಾದ ಚರ್ಚೆಯಲ್ಲಿ ನಾಯಕರಿದ್ದಾರೆ.ಇದರ ನಡುವೆ ಬಿಜೆಪಿ ಸರ್ಕಾರ ರಚನೆ ಪ್ರಯತ್ನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದಾರೆ. ಅವರು ದೇವರ ಮೊರೆ ಹೋಗಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಸ್ಥಿತ್ಯಂತರದ ನಡುವೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದು ಅವರ ಸ್ವಗ್ರಾಮ ಬೂಕನಕೆರೆಯಲ್ಲಿ ಮನೆದೇವರು ಹಾಗೂ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ಬೀದರ್ ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಇಂದು ಬೆಳಗ್ಗೆ ಗವಿಗಂಗಾಧರೇಶ್ವರ ದೇಗುಲದಲ್ಲಿ ಲೋಕಕಲ್ಯಾಣರ್ಥವಾಗಿ ಯಡಿಯೂರಪ್ಪ ರುದ್ರಹೋಮ ನೆರವೇರಿಸಲಿದ್ದಾರೆ. ಗುರುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲಿದ್ದು, 4 – 5 ದಿನದಲ್ಲಿ ಸರ್ಕಾರ ರಚಿಸುವ ವಿಶ್ವಾಸ ಹೊಂದಿರುವ ಯಡಿಯೂರಪ್ಪ ಈಗಾಗಲೇ ದೇವರ ಮೊರೆ ಹೋಗಿದ್ದಾರೆ

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...