ಬಿಯರ್ ಬಿಟ್ಟು ಪೊಲೀಸ್ ಆದ ಡಾಲಿ ಧನಂಜಯ

Date:

ಮಕರ ಸಂಕ್ರಾಂತಿ ದಿನದಂದು ಡಾಲಿ ಧನಂಜಯ ಅವರ 25ನೇ ಚಿತ್ರ ಘೋಷಣೆಯಾಗಿದೆ. ಕೆಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ 25ನೇ ಚಿತ್ರ ಬರುತ್ತಿದ್ದು, ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ.

ವಿಜಯ್ ಎನ್. ನಿರ್ದೇಶನದ ‘ಹೊಯ್ಸಳ’ ಚಿತ್ರದಲ್ಲಿ ಧನಂಜಯ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕಾರ್ತಿಕ್ ಮತ್ತು ಯೋಗಿ ಬಿ ರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಚಿತ್ರಕ್ಕೆ ಥಮನ್ ಎಸ್ ಸಂಗೀತವಿದೆ. ಈ ವರ್ಷದ ಕರ್ನಾಟಕ ರಾಜ್ಯೋತ್ಸವಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ಧನಂಜಯ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಚಿತ್ರದ ನಾಯಕಿ ಸೇರಿದಂತೆ ಉಳಿದ ತಾರಾಗಣದ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

https://m.facebook.com/story.php?story_fbid=479014460250715&id=100044264957540

2021ರಲ್ಲಿ ಧನಂಜಯ ನಾಯಕನಾಗಿ ನಟಿಸಿದ ಬಡವ ರಾಸ್ಕಲ್, ರತ್ನನ್ ಪ್ರಪಂಚ, ಪೋಷಕ ಪಾತ್ರದಲ್ಲಿ ನಟಿಸಿದ್ದ ಸಲಗ ಮತ್ತು ಪುಷ್ಪ ಚಿತ್ರಗಳು ಬಿಡುಗಡೆಯಾಗಿದ್ದವು. ಇನ್ನೂ ಬೈರಾಗಿ, ತೋತಾಪುರಿ ಚಿತ್ರೀಕರಣ ಮುಗಿದಿದ್ದು, ಹೆಡ್ ಬುಶ್, ಮಾನ್ಸೂನ್ ರಾಗ. ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...