ಬಿಸಿಸಿಐ ವಿರುದ್ಧ ಕೋಪಗೊಂಡ ಕೊಹ್ಲಿ ಮಾಡಿದ್ದೇನು?

Date:

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತ್ಯಜಿಸುವುದಾಗಿ ಹೇಳಿಕೆ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡ ಕಳೆದುಕೊಂಡಿದ್ದಾರೆ.  ಹೌದು ಬಿಸಿಸಿಐ ವಿರಾಟ್ ಕೊಹ್ಲಿಯವರನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು ರೋಹಿತ್ ಶರ್ಮಾ ಹೆಗಲಿಗೆ ನಾಯಕತ್ವದ ಜವಾಬ್ದಾರಿಯನ್ನು ಹಾಕಿದೆ.

ಹೀಗೆ ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಬಿಸಿಸಿಐ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೌದು, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ಏರ್ಪಡಿಸಿರುವ ವಿಮಾನದಲ್ಲಿ ವಿರಾಟ್ ಕೊಹ್ಲಿ ಪ್ರಯಾಣಿಸಲು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿ ಮತ್ತೊಮ್ಮೆ ವೈರಲ್ ಆಗುತ್ತಿದೆ.

ಹೀಗೆ ಬಿಸಿಸಿಐ ಏರ್ಪಡಿಸಿರುವ ವಿಮಾನದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ಒಲ್ಲೆ ಎಂದಿರುವ ವಿರಾಟ್ ಕೊಹ್ಲಿ ತಮ್ಮದೇ ಆದ ಖಾಸಗಿ ವಿಮಾನದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...