ಬೆಂಗಳೂರಿಗರೇ ಎಚ್ಚರ: ರಾಜಧಾನಿಯಲ್ಲಿವೆ ಅಪಾಯಕಾರಿ ಒಣ ಮರಗಳು, ಸ್ವಲ್ಪ ಯಾಮಾರಿದ್ರೂ ಅಪಾಯ ಫಿಕ್ಸ್!

Date:

 

ಬೆಂಗಳೂರು:- ಬೆಂಗಳೂರಿಗರೇ ಎಚ್ಚರ, ಎಚ್ಚರ. ರಾಜಧಾನಿಯಲ್ಲಿ ಅಪಾಯಕಾರಿ ಒಣ ಮರಗಳು ಇದ್ದು, ಸ್ವಲ್ಪ ಯಾಮಾರಿದ್ರೂ ಅಪಾಯ ಫಿಕ್ಸ್ ಎನ್ನಲಾಗಿದೆ.

ನಗರದಲ್ಲಿ ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ

ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ. ಇಲ್ಲಾಂದ್ರೆ ಅಪಾಯ ಫಿಕ್ಸ್ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...