ಬೆಂಗಳೂರಿನಲ್ಲಿ ಇಂದಿನಿಂದಲೇ 144 ಜಾರಿ; ಜಾಗ್ರತೆ!

Date:

ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.

ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

ವಾರಾಂತ್ಯದಲ್ಲಿ ಸಾಮಾನ್ಯವಾಗಿರುವ ಜನಜಂಗುಳಿ ತಪ್ಪಿಸಲು ನಿಷೇಧಾಜ್ಞೆ ಜಾರಿಯಾಗಿದೆ. ಶುಕ್ರವಾರ ರಾತ್ರಿ 8 ಗಂಟೆಯಿಂದಲೇ ಆರಂಭವಾಗುವ ನಿಷೇಧಾಜ್ಞೆ ಸೋಮವಾರ ಬೆಳಗ್ಗೆ 5 ಗಂಟೆಗೆ ಮುಕ್ತವಾಗಲಿದೆ. ಅಲ್ಲದೇ, ಸದ್ಯ ಜಾರಿಯಲ್ಲಿರುವ ರಾತ್ರಿ ನಿಷೇಧಾಜ್ಞೆ ಕೂಡ ಜನವರಿ 19ರ ವರೆಗೆ ಮುಂದುವರೆಯಲಿದೆ. ಇದರಿಂದ ಉದ್ಯಮಗಳು, ಶಾಪಿಂಗ್​ ಮಾಲ್, ಥಿಯೇಟರ್, ಶಾಪಿಂಗ್ ಸ್ಟ್ರೀಟ್ ಗಳಿಗೆ ನಷ್ಟವಾಗಲಿದೆ. ಅಲ್ಲದೇ, ಇಂದಿನಿಂದ ಹೋಟೆಲ್​​, ರೆಸ್ಟೋರೆಂಟ್ ಸೇರಿದಂತೆ ಸಾರ್ವಜನಿಕ ಅಂಗಡಿಗಳಲ್ಲಿ ಶೇ. 50ರಷ್ಟು ಮಿತಿ ಜಾರಿಗೆ ಬರಲಿದೆ.

144 ಸೆಕ್ಷನ್ ಜಾರಿ:

ಈ ನಡುವೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಗೆ ನಗರ ಪೊಲೀಸ್ ಆಯುಕ್ತರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಇಂದಿನಿಂದ ಜನವರಿ 19ವರೆಗೂ ನಗರದಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತಹವರ ವಿರುದ್ಧ ಐಪಿಸಿ 188 ಸೆಕ್ಷನ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...