ಬೆಂಗಳೂರಿನಲ್ಲಿ ಕುಡಿದು ಗಾಡಿ ಹತ್ತುವ ಮುನ್ನ ಎಚ್ಚರ!!

Date:

ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು ಆಗಲಿದೆ ಹುಷಾರ್ ! ಇನ್ನು ರಸ್ತೆಗಳಲ್ಲಿ ಬೇಕಾಬಿಟ್ಟಿ ವ್ಹೀಲಿಂಗ್ ಮಾಡಿ ಜನರಲ್ಲಿ ಭೀತಿ ಹುಟ್ಟಿಸಿದರೆ ಜೈಲಿಗೆ ಹೋಗಬೇಕಾದೀತು! ಕೋವಿಡ್ ಹಿನ್ನೆಲೆಯಲ್ಲಿ “ಡ್ರಿಂಕ್ ಅಂಡ್ ಡ್ರೈವ್ ” ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಸಂಚಾರ ಪೊಲೀಸರು ಇದೀಗ ಬೆಂಗಳೂರು ರಸ್ತೆಗೆ ಇಳಿದಿದ್ದಾರೆ. ಕುಡಿದು ವಾಹನ ಚಾಲನೆ ಮಾಡಿದರೆ ಚಾಲನ ಪರವಾನಗಿ ಅಮಾನತು ಮಾಡಲಾಗುತ್ತಿದೆ. ಜತೆಗೆ ಸಾವಿರಾರು ರೂಪಾಯಿ ದಂಡವನ್ನು ವಿಧಿಸುತ್ತಿದ್ದಾರೆ. ಅಪಾಯಕಾರಿ ವ್ಹೀಲಿಂಗ್ ಮಾಡುವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಕಳುಹಿಸಲಾಗುತ್ತಿದೆ.

ಕೋರಮಂಗಲದ ಕಲ್ಯಾಣ ಮಂಟಪದ ಬಳಿ ತಮಿಳುನಾಡಿನ ಶಾಸಕ ಪುತ್ರನೊಬ್ಬನ ಅಡಿ ಕಾರು ಅಪಘಾತ ಪ್ರಕರಣದಲ್ಲಿ ಏಳು ಮಂದಿ ಸಾವಿಗೀಡಾಗಿದ್ದರು. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಬಳಿ ಸಂಭವಿಸಿದ ಕಾರು ಅಪಘಾತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತಗಳಿಗೆ ಮದ್ಯ ಸೇವನೆ ಅಥವಾ ಮಾದಕ ವಸ್ತು ಸೇವನೆ ಮಾಡಿ ಅಪಾಯಕಾರಿ ಚಾಲನೆ ಮಾಡಿರುವುದು ಕಾರಣ ಎಂಬುದು ಗೊತ್ತಾಗುತ್ತಿದ್ದಂತೆ ಸಂಚಾರ ವಿಭಾಗದ ಪೊಲೀಸರನ್ನು ರಾತ್ರಿ ಕಾರ್ಯಾಚರಣೆಗೆ ಇಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...