ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

Date:

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನುಕುಮಾರ್ ಮತ್ತು ಸಚಿನ್ ಬಂಧಿತ ಆರೋಪಿಗಳಾಗಿದ್ದು, ಇವರು ಹಗಲಿನಲ್ಲಿ ತಳ್ಳುವ ಗಾಡಿಗಳಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿದ್ದ ಆರೋಪಿಗಳು ರಾತ್ರಿಯಾದರೆ ದ್ವಿಚಕ್ರ ವಾಹನಗಳ ಹ್ಯಾಂಡ್‌ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು.

ಇಬ್ಬರು ಸಹೋದರಿಯರನ್ನೇ ವಿವಾಹವಾಗಿದ್ದ ಮನುಕುಮಾರ್ ಮತ್ತು ಸಚಿನ್‌ ಕೃತ್ಯದ ಕುರಿತು ಪತ್ನಿಯರಿಗೂ ಅರಿವಿತ್ತು. ಐಷಾರಾಮಿ ಜೀವನಕ್ಕಾಗಿ ಪತಿಯರ ಕೃತ್ಯಕ್ಕೆ ಪತ್ನಿಯರೂ ಬೆಂಬಲ ನೀಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

ಈ ಆರೋಪಿಗಳಿಂದ 37.50 ಲಕ್ಷ ರೂ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ನಗರದ ರಾಮಮೂರ್ತಿನಗರ, ಮಹದೇವಪುರ, ಹೆಚ್‌ಎಎಲ್, ವೈಟ್‌ಫೀಲ್ಡ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...